ಮೈಸೂರು | ಉದ್ಯಮಿಗಳ ವಾಕಥಾನ್ 5 ಕಿ.ಮೀ ನಡಿಗೆ

October 20, 2022
12:43 PM

ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಅಂಗಳದಲ್ಲಿ ಗುರುವಾರ ಬೆಳಿಗ್ಗೆ ನೂರಾರು ಮಂದಿ ಉದ್ಯಮಿಗಳು 5 ಕಿ.ಮೀ ನಡಿಗೆಯ ‘ವಾಕಥಾನ್’ನಲ್ಲಿ ಪಾಲ್ಗೊಂಡರು.ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ‘ಬಿಯಾಂಡ್ ಬೆಂಗಳೂರು’ ಅಭಿಯಾನದಡಿ ನಡೆಯುತ್ತಿರುವ ‘ಬಿಗ್ ಟೆಕ್ ಷೋ’ನ ಭಾಗವಾಗಿ ಬೆಳಿಗ್ಗೆ ಆಯೋಜಿಸಿದ್ದ ‘ವಾಕಥಾನ್’ಗೆ ಐ.ಟಿ ಬಿ.ಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು.

Advertisement
Advertisement

ನಡಿಗೆಗೂ ಮುನ್ನ ಆವರಣದಲ್ಲಿ ಯೋಗಾಭ್ಯಾಸ, ವ್ಯಾಯಾಮ ಮಾಡಿದ ಉದ್ಯಮಿಗಳು ನಂತರ ದೊಡ್ಡ ಗಡಿಯಾರ, ಗಾಂಧಿ ವೃತ್ತ, ಚಿಕ್ಕ ಗಡಿಯಾರ ವೃತ್ತ, ದೇವರಾಜ ಅರಸು ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಕ್ರಾಫರ್ಡ್ ಭವನ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಅರಮನೆ ವರಾಹ ದ್ವಾರದವರೆಗೆ ಸಾಗಿದರು.

ಬ್ರಿಟಿಷ್ ಹೈಕಮಿಷನರ್ ಆಂಡ್ರ್ಯೂ ಫ್ಲೆಮಿಂಗ್, ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ಸಿಇಒ ಸಂಜೀವ್ ಗುಪ್ತಾ, ಮೈಸೂರು ಕ್ಲಸ್ಟರ್ ಐ.ಟಿ ಬಿ.ಟಿ ಇಲಾಖೆಯ ಇ.ವಿ.ರಮಣ ರೆಡ್ಡಿ, ನಿರ್ದೇಶಕರಾದ ಮೀನಾ ನಾಗರಾಜ್, ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಾ.ಅಜಯ್ ಗರ್ಗ್ ಇದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror