ಮೈಸೂರು | ಉದ್ಯಮಿಗಳ ವಾಕಥಾನ್ 5 ಕಿ.ಮೀ ನಡಿಗೆ

October 20, 2022
12:43 PM

ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಅಂಗಳದಲ್ಲಿ ಗುರುವಾರ ಬೆಳಿಗ್ಗೆ ನೂರಾರು ಮಂದಿ ಉದ್ಯಮಿಗಳು 5 ಕಿ.ಮೀ ನಡಿಗೆಯ ‘ವಾಕಥಾನ್’ನಲ್ಲಿ ಪಾಲ್ಗೊಂಡರು.ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ‘ಬಿಯಾಂಡ್ ಬೆಂಗಳೂರು’ ಅಭಿಯಾನದಡಿ ನಡೆಯುತ್ತಿರುವ ‘ಬಿಗ್ ಟೆಕ್ ಷೋ’ನ ಭಾಗವಾಗಿ ಬೆಳಿಗ್ಗೆ ಆಯೋಜಿಸಿದ್ದ ‘ವಾಕಥಾನ್’ಗೆ ಐ.ಟಿ ಬಿ.ಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು.

ನಡಿಗೆಗೂ ಮುನ್ನ ಆವರಣದಲ್ಲಿ ಯೋಗಾಭ್ಯಾಸ, ವ್ಯಾಯಾಮ ಮಾಡಿದ ಉದ್ಯಮಿಗಳು ನಂತರ ದೊಡ್ಡ ಗಡಿಯಾರ, ಗಾಂಧಿ ವೃತ್ತ, ಚಿಕ್ಕ ಗಡಿಯಾರ ವೃತ್ತ, ದೇವರಾಜ ಅರಸು ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಕ್ರಾಫರ್ಡ್ ಭವನ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಅರಮನೆ ವರಾಹ ದ್ವಾರದವರೆಗೆ ಸಾಗಿದರು.

ಬ್ರಿಟಿಷ್ ಹೈಕಮಿಷನರ್ ಆಂಡ್ರ್ಯೂ ಫ್ಲೆಮಿಂಗ್, ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ಸಿಇಒ ಸಂಜೀವ್ ಗುಪ್ತಾ, ಮೈಸೂರು ಕ್ಲಸ್ಟರ್ ಐ.ಟಿ ಬಿ.ಟಿ ಇಲಾಖೆಯ ಇ.ವಿ.ರಮಣ ರೆಡ್ಡಿ, ನಿರ್ದೇಶಕರಾದ ಮೀನಾ ನಾಗರಾಜ್, ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಾ.ಅಜಯ್ ಗರ್ಗ್ ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror