ಮೈಸೂರು ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಅಂಗಳದಲ್ಲಿ ಗುರುವಾರ ಬೆಳಿಗ್ಗೆ ನೂರಾರು ಮಂದಿ ಉದ್ಯಮಿಗಳು 5 ಕಿ.ಮೀ ನಡಿಗೆಯ ‘ವಾಕಥಾನ್’ನಲ್ಲಿ ಪಾಲ್ಗೊಂಡರು.ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ‘ಬಿಯಾಂಡ್ ಬೆಂಗಳೂರು’ ಅಭಿಯಾನದಡಿ ನಡೆಯುತ್ತಿರುವ ‘ಬಿಗ್ ಟೆಕ್ ಷೋ’ನ ಭಾಗವಾಗಿ ಬೆಳಿಗ್ಗೆ ಆಯೋಜಿಸಿದ್ದ ‘ವಾಕಥಾನ್’ಗೆ ಐ.ಟಿ ಬಿ.ಟಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು.
ನಡಿಗೆಗೂ ಮುನ್ನ ಆವರಣದಲ್ಲಿ ಯೋಗಾಭ್ಯಾಸ, ವ್ಯಾಯಾಮ ಮಾಡಿದ ಉದ್ಯಮಿಗಳು ನಂತರ ದೊಡ್ಡ ಗಡಿಯಾರ, ಗಾಂಧಿ ವೃತ್ತ, ಚಿಕ್ಕ ಗಡಿಯಾರ ವೃತ್ತ, ದೇವರಾಜ ಅರಸು ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಕ್ರಾಫರ್ಡ್ ಭವನ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಅರಮನೆ ವರಾಹ ದ್ವಾರದವರೆಗೆ ಸಾಗಿದರು.
ಬ್ರಿಟಿಷ್ ಹೈಕಮಿಷನರ್ ಆಂಡ್ರ್ಯೂ ಫ್ಲೆಮಿಂಗ್, ಕೆಡಿಇಎಂ ಅಧ್ಯಕ್ಷ ಬಿ.ವಿ.ನಾಯ್ಡು, ಸಿಇಒ ಸಂಜೀವ್ ಗುಪ್ತಾ, ಮೈಸೂರು ಕ್ಲಸ್ಟರ್ ಐ.ಟಿ ಬಿ.ಟಿ ಇಲಾಖೆಯ ಇ.ವಿ.ರಮಣ ರೆಡ್ಡಿ, ನಿರ್ದೇಶಕರಾದ ಮೀನಾ ನಾಗರಾಜ್, ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಾ.ಅಜಯ್ ಗರ್ಗ್ ಇದ್ದರು.
ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…