ಅಕ್ರಮ ಗರ್ಭಪಾತದ ಪ್ರತ್ಯೇಕ ಪ್ರಕರಣದ ತನಿಖೆಯಲ್ಲಿ ವಾರ್ಧಾದ ಅರವಿಯಲ್ಲಿರುವ ಖಾಸಗಿ ಆಸ್ಪತ್ರೆಯ ಜೈವಿಕ ಅನಿಲ ಘಟಕದಲ್ಲಿ 11 ತಲೆಬುರುಡೆಗಳು ಮತ್ತು 54 ಭ್ರೂಣಗಳ ಮೂಳೆಗಳು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆಸ್ಪತ್ರೆಯ ನಿರ್ದೇಶಕಿ ರೇಖಾ ಕದಂ ಮತ್ತು ಅವರ ಸಹಚರರಲ್ಲಿ ಒಬ್ಬರನ್ನು ಬಂಧಿಸಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ಜ್ಯೋತ್ಸ್ನ ಗಿರಿ ತಿಳಿಸಿದ್ದಾರೆ.
ಗರ್ಭಪಾತ ನಡೆದ ಆಸ್ಪತ್ರೆಯ ಹಿಂಭಾಗದ ಜಾಗದಲ್ಲಿ ಬುಧವಾರ ಅಗೆಯುವಾಗ ಮಾನವ ತಲೆಬುಡೆ, ರಕ್ತಸಿಕ್ತ ಬಟ್ಟೆ ಭ್ರೂಣ ಪತ್ತೆಯಾಗಿದೆ. ನಂತರ ಗುರುವಾರ ಆ ಪ್ರದೇಶದಲ್ಲಿನ ಜೈವಿಕ ಅನಿಲ ಘಟಕವನ್ನು ಪರಿಶೀಲಿಸಿದಾಗ ಚಿಕ್ಕ ಮಕ್ಕಳ ತಲೆಬುರುಡೆಯೂ ಪತ್ತೆಯಾಗಿದೆ. ಇಲ್ಲಿಯವರೆಗೆ ಒಟ್ಟು 11 ಮಾನವ ತಲೆಬುರುಡೆಗಳು, 54 ಮೂಳೆಗಳು, ಭ್ರೂಣಗಳು ಮತ್ತು ರಕ್ತಸಿಕ್ತ ಬಟ್ಟೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಾ.ರೇಖಾ ಕದಂ 30 ಸಾವಿರ ರೂ.ಗೆ ಅಕ್ರಮ ಗರ್ಭಪಾತ ಮಾಡಿಸಿರುವುದು ಬಯಲಾದ ಹಿನ್ನಲೆಯಲ್ಲಿ ಅರವಿ ಪೊಲೀಸರು ಕ್ಷಿಪ್ರ ತನಿಖೆ ನಡೆಸಿ ರೇಖಾ ಸಹಿತ ಅಪ್ರಾಪ್ತ ಬಾಲಕಿಯ ಪೋಷಕರನ್ನು ಬಂಧಿಸಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…