Advertisement
ರಾಷ್ಟ್ರೀಯ

ವಾರ್ಧಾ | ಖಾಸಗಿ ಆಸ್ಪತ್ರೆಯ ಜೈವಿಕ ಅನಿಲ ಘಟಕದಲ್ಲಿ ತಲೆಬುರುಡೆ ಮತ್ತು ಭ್ರೂಣದ ಮೂಳೆಗಳು ಪತ್ತೆ …! |

Share

ಅಕ್ರಮ ಗರ್ಭಪಾತದ ಪ್ರತ್ಯೇಕ ಪ್ರಕರಣದ ತನಿಖೆಯಲ್ಲಿ ವಾರ್ಧಾದ ಅರವಿಯಲ್ಲಿರುವ ಖಾಸಗಿ ಆಸ್ಪತ್ರೆಯ ಜೈವಿಕ ಅನಿಲ ಘಟಕದಲ್ಲಿ 11 ತಲೆಬುರುಡೆಗಳು ಮತ್ತು 54 ಭ್ರೂಣಗಳ ಮೂಳೆಗಳು ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಆಸ್ಪತ್ರೆಯ ನಿರ್ದೇಶಕಿ ರೇಖಾ ಕದಂ ಮತ್ತು ಅವರ ಸಹಚರರಲ್ಲಿ ಒಬ್ಬರನ್ನು ಬಂಧಿಸಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ಜ್ಯೋತ್ಸ್ನ ಗಿರಿ ತಿಳಿಸಿದ್ದಾರೆ.

ಗರ್ಭಪಾತ ನಡೆದ ಆಸ್ಪತ್ರೆಯ ಹಿಂಭಾಗದ ಜಾಗದಲ್ಲಿ ಬುಧವಾರ ಅಗೆಯುವಾಗ ಮಾನವ ತಲೆಬುಡೆ, ರಕ್ತಸಿಕ್ತ ಬಟ್ಟೆ ಭ್ರೂಣ ಪತ್ತೆಯಾಗಿದೆ. ನಂತರ ಗುರುವಾರ ಆ ಪ್ರದೇಶದಲ್ಲಿನ ಜೈವಿಕ ಅನಿಲ ಘಟಕವನ್ನು ಪರಿಶೀಲಿಸಿದಾಗ ಚಿಕ್ಕ ಮಕ್ಕಳ ತಲೆಬುರುಡೆಯೂ ಪತ್ತೆಯಾಗಿದೆ. ಇಲ್ಲಿಯವರೆಗೆ ಒಟ್ಟು 11 ಮಾನವ ತಲೆಬುರುಡೆಗಳು, 54 ಮೂಳೆಗಳು, ಭ್ರೂಣಗಳು ಮತ್ತು ರಕ್ತಸಿಕ್ತ ಬಟ್ಟೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಾ.ರೇಖಾ ಕದಂ 30 ಸಾವಿರ ರೂ.ಗೆ ಅಕ್ರಮ ಗರ್ಭಪಾತ ಮಾಡಿಸಿರುವುದು ಬಯಲಾದ ಹಿನ್ನಲೆಯಲ್ಲಿ ಅರವಿ ಪೊಲೀಸರು ಕ್ಷಿಪ್ರ ತನಿಖೆ ನಡೆಸಿ ರೇಖಾ ಸಹಿತ ಅಪ್ರಾಪ್ತ ಬಾಲಕಿಯ ಪೋಷಕರನ್ನು ಬಂಧಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

5 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

6 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

7 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

7 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

7 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

8 hours ago