ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯ | ಮಕ್ಕಳಿಗೆ ಪ್ರತಿ ಗಂಟೆ ನೀರು ಕುಡಿಯುವ ಜ್ಞಾಪನೆ

February 10, 2026
6:57 AM
ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕೊಪ್ಪಳದಲ್ಲಿ ಯಶಸ್ವಿಯಾದ ಮಾದರಿ ಈಗ ರಾಜ್ಯದ ಎಲ್ಲ ಶಾಲೆಗಳಿಗೂ ವಿಸ್ತರಣೆ.

ಮಕ್ಕಳ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಪ್ರತಿ ಗಂಟೆಗೆ ‘ನೀರಿನ ಗಂಟೆ’ ಅಥವಾ ‘ವಾಟರ್ ಬೆಲ್’ ಬಾರಿಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ‘ಪಿ.ಎಂ ಪೋಷಣೆ ಶಕ್ತಿ ನಿರ್ಮಾಣ್’ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸುಮಾರು ಮೂರೂವರೆ ವರ್ಷಗಳ ಹಿಂದಿನಿಂದಲೇ ಜಾರಿಯಲ್ಲಿರುವ ಈ ಯೋಜನೆ, ಈಗ ರಾಜ್ಯದ ಎಲ್ಲ ಶಾಲೆಗಳಿಗೂ ವಿಸ್ತರಣೆಗೊಂಡಿದೆ. ಗಂಗಾವತಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ‘ವಾಟರ್ ಬೆಲ್’ ಪರಿಕಲ್ಪನೆ ಯಶಸ್ವಿಯಾಗಿ ಜಾರಿಯಲ್ಲಿದೆ.

ಈ ಶಾಲೆಯಲ್ಲಿ ಒಂದರಿಂದ ಐದನೇ ತರಗತಿವರೆಗೆ ಓದುತ್ತಿರುವ ಮಕ್ಕಳಿಗೆ ನೀರಿನ ಬಾಟಲಿಗಳನ್ನು ನೀಡಲಾಗಿದ್ದು, ಪ್ರತಿತಾಸಿಗೂ ಒಂದು ಸಲ ಬೆಲ್ ಬಾರಿಸಲಾಗುತ್ತದೆ. ಇದರ ಮೂಲಕ ಮಕ್ಕಳು ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲೆಯ ಮಾದರಿಯನ್ನು ಅನುಸರಿಸಿ ರಾಜ್ಯದ ಸುಮಾರು 120 ಆಶ್ರಮ ಶಾಲೆಗಳಲ್ಲಿ ‘ವಾಟರ್ ಬೆಲ್’ ಯೋಜನೆಯನ್ನು ಜಾರಿಗೊಳಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮೊದಲೇ ಆದೇಶಿಸಿತ್ತು. ಇದೀಗ ಈ ಆದೇಶ ರಾಜ್ಯದ ಎಲ್ಲ ಶಾಲೆಗಳಿಗೂ ಅನ್ವಯವಾಗಿದೆ.

ತಜ್ಞರ ಅಭಿಪ್ರಾಯದಂತೆ, ಮಕ್ಕಳಲ್ಲಿ ದೇಹದ ನೀರಿನ ಕೊರತೆ (ಡಿಹೈಡ್ರೇಶನ್) ತಪ್ಪಿಸಲು ಮತ್ತು ಏಕಾಗ್ರತೆ ಹೆಚ್ಚಿಸಲು ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ‘ವಾಟರ್ ಬೆಲ್’ ಯೋಜನೆ ಮಕ್ಕಳ ಆರೋಗ್ಯ ಕಾಪಾಡುವತ್ತ ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ…

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ….? | ಪ್ರೋತ್ಸಾಹಧನ 5 ರಿಂದ 7 ರೂ.ಗೆ ಹೆಚ್ಚಿಸುವ ಚಿಂತನೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror