Advertisement
MIRROR FOCUS

ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯ | ಮಕ್ಕಳಿಗೆ ಪ್ರತಿ ಗಂಟೆ ನೀರು ಕುಡಿಯುವ ಜ್ಞಾಪನೆ

Share

ಮಕ್ಕಳ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಪ್ರತಿ ಗಂಟೆಗೆ ‘ನೀರಿನ ಗಂಟೆ’ ಅಥವಾ ‘ವಾಟರ್ ಬೆಲ್’ ಬಾರಿಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ‘ಪಿ.ಎಂ ಪೋಷಣೆ ಶಕ್ತಿ ನಿರ್ಮಾಣ್’ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಸುಮಾರು ಮೂರೂವರೆ ವರ್ಷಗಳ ಹಿಂದಿನಿಂದಲೇ ಜಾರಿಯಲ್ಲಿರುವ ಈ ಯೋಜನೆ, ಈಗ ರಾಜ್ಯದ ಎಲ್ಲ ಶಾಲೆಗಳಿಗೂ ವಿಸ್ತರಣೆಗೊಂಡಿದೆ. ಗಂಗಾವತಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ‘ವಾಟರ್ ಬೆಲ್’ ಪರಿಕಲ್ಪನೆ ಯಶಸ್ವಿಯಾಗಿ ಜಾರಿಯಲ್ಲಿದೆ.

ಈ ಶಾಲೆಯಲ್ಲಿ ಒಂದರಿಂದ ಐದನೇ ತರಗತಿವರೆಗೆ ಓದುತ್ತಿರುವ ಮಕ್ಕಳಿಗೆ ನೀರಿನ ಬಾಟಲಿಗಳನ್ನು ನೀಡಲಾಗಿದ್ದು, ಪ್ರತಿತಾಸಿಗೂ ಒಂದು ಸಲ ಬೆಲ್ ಬಾರಿಸಲಾಗುತ್ತದೆ. ಇದರ ಮೂಲಕ ಮಕ್ಕಳು ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲೆಯ ಮಾದರಿಯನ್ನು ಅನುಸರಿಸಿ ರಾಜ್ಯದ ಸುಮಾರು 120 ಆಶ್ರಮ ಶಾಲೆಗಳಲ್ಲಿ ‘ವಾಟರ್ ಬೆಲ್’ ಯೋಜನೆಯನ್ನು ಜಾರಿಗೊಳಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮೊದಲೇ ಆದೇಶಿಸಿತ್ತು. ಇದೀಗ ಈ ಆದೇಶ ರಾಜ್ಯದ ಎಲ್ಲ ಶಾಲೆಗಳಿಗೂ ಅನ್ವಯವಾಗಿದೆ.

ತಜ್ಞರ ಅಭಿಪ್ರಾಯದಂತೆ, ಮಕ್ಕಳಲ್ಲಿ ದೇಹದ ನೀರಿನ ಕೊರತೆ (ಡಿಹೈಡ್ರೇಶನ್) ತಪ್ಪಿಸಲು ಮತ್ತು ಏಕಾಗ್ರತೆ ಹೆಚ್ಚಿಸಲು ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ‘ವಾಟರ್ ಬೆಲ್’ ಯೋಜನೆ ಮಕ್ಕಳ ಆರೋಗ್ಯ ಕಾಪಾಡುವತ್ತ ಮಹತ್ವದ ಹೆಜ್ಜೆಯಾಗಿದೆ.

ಇದನ್ನೂ ಓದಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

6 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

10 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

19 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

19 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

2 days ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago