ಮಕ್ಕಳ ಉತ್ತಮ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಪ್ರತಿ ಗಂಟೆಗೆ ‘ನೀರಿನ ಗಂಟೆ’ ಅಥವಾ ‘ವಾಟರ್ ಬೆಲ್’ ಬಾರಿಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ‘ಪಿ.ಎಂ ಪೋಷಣೆ ಶಕ್ತಿ ನಿರ್ಮಾಣ್’ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಸುಮಾರು ಮೂರೂವರೆ ವರ್ಷಗಳ ಹಿಂದಿನಿಂದಲೇ ಜಾರಿಯಲ್ಲಿರುವ ಈ ಯೋಜನೆ, ಈಗ ರಾಜ್ಯದ ಎಲ್ಲ ಶಾಲೆಗಳಿಗೂ ವಿಸ್ತರಣೆಗೊಂಡಿದೆ. ಗಂಗಾವತಿ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ‘ವಾಟರ್ ಬೆಲ್’ ಪರಿಕಲ್ಪನೆ ಯಶಸ್ವಿಯಾಗಿ ಜಾರಿಯಲ್ಲಿದೆ.
ಈ ಶಾಲೆಯಲ್ಲಿ ಒಂದರಿಂದ ಐದನೇ ತರಗತಿವರೆಗೆ ಓದುತ್ತಿರುವ ಮಕ್ಕಳಿಗೆ ನೀರಿನ ಬಾಟಲಿಗಳನ್ನು ನೀಡಲಾಗಿದ್ದು, ಪ್ರತಿತಾಸಿಗೂ ಒಂದು ಸಲ ಬೆಲ್ ಬಾರಿಸಲಾಗುತ್ತದೆ. ಇದರ ಮೂಲಕ ಮಕ್ಕಳು ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುತ್ತಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಜಿಲ್ಲೆಯ ಮಾದರಿಯನ್ನು ಅನುಸರಿಸಿ ರಾಜ್ಯದ ಸುಮಾರು 120 ಆಶ್ರಮ ಶಾಲೆಗಳಲ್ಲಿ ‘ವಾಟರ್ ಬೆಲ್’ ಯೋಜನೆಯನ್ನು ಜಾರಿಗೊಳಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮೊದಲೇ ಆದೇಶಿಸಿತ್ತು. ಇದೀಗ ಈ ಆದೇಶ ರಾಜ್ಯದ ಎಲ್ಲ ಶಾಲೆಗಳಿಗೂ ಅನ್ವಯವಾಗಿದೆ.
ತಜ್ಞರ ಅಭಿಪ್ರಾಯದಂತೆ, ಮಕ್ಕಳಲ್ಲಿ ದೇಹದ ನೀರಿನ ಕೊರತೆ (ಡಿಹೈಡ್ರೇಶನ್) ತಪ್ಪಿಸಲು ಮತ್ತು ಏಕಾಗ್ರತೆ ಹೆಚ್ಚಿಸಲು ನಿಯಮಿತವಾಗಿ ನೀರು ಕುಡಿಯುವ ಅಭ್ಯಾಸ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ‘ವಾಟರ್ ಬೆಲ್’ ಯೋಜನೆ ಮಕ್ಕಳ ಆರೋಗ್ಯ ಕಾಪಾಡುವತ್ತ ಮಹತ್ವದ ಹೆಜ್ಜೆಯಾಗಿದೆ.
ಇದನ್ನೂ ಓದಿ…
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…