ರಾಜ್ಯದಲ್ಲಿ ಮುಂಗಾರು ವಿಳಂಭವಾಗಿ ಬಂದ ಕಾರಣ ರಾಜ್ಯದ ಅಣೆಕಟ್ಟುಗಳು ನೀರು ಖಾಲಿಯಾಗಿ ಬಣಗುಟ್ಟುತ್ತಿದ್ದವು. ಆದರೆ ಕಳೆದ ನಾಲ್ಕು ದಿನಗಳಿಂದ ಮುಂಗಾರು ಬಿರುಸುಗೊಂಡ ಕಾರಣ ಡ್ಯಾಂಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ರಾಜ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್ಎಸ್ ಡ್ಯಾಂಗೆ #KRSDam ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ #CauveryBasin ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ. ಅಲ್ಲದೇ ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಇನ್ನೂ ಡ್ಯಾಂನ ಒಳಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆ ಕಂಡಿದೆ. ಸದ್ಯ ಡ್ಯಾಂಗೆ 29,552 ಕ್ಯೂಸೆಕ್ ನೀರು ಒಳಹರಿವಿದ್ದು, ಹೊರಹರಿವು 5,297 ಕ್ಯೂಸೆಕ್ ನಷ್ಟಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…