ರಾಜ್ಯದಲ್ಲಿ ಮುಂಗಾರು ವಿಳಂಭವಾಗಿ ಬಂದ ಕಾರಣ ರಾಜ್ಯದ ಅಣೆಕಟ್ಟುಗಳು ನೀರು ಖಾಲಿಯಾಗಿ ಬಣಗುಟ್ಟುತ್ತಿದ್ದವು. ಆದರೆ ಕಳೆದ ನಾಲ್ಕು ದಿನಗಳಿಂದ ಮುಂಗಾರು ಬಿರುಸುಗೊಂಡ ಕಾರಣ ಡ್ಯಾಂಗಳಲ್ಲಿ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ರಾಜ್ಯದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್ಎಸ್ ಡ್ಯಾಂಗೆ #KRSDam ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ #CauveryBasin ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ ಮಟ್ಟ 95 ಅಡಿಗೆ ಏರಿಕೆಯಾಗಿದೆ. ಅಲ್ಲದೇ ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು ಬಂದಿದ್ದು, 19.139 ಟಿಎಂಸಿಯಷ್ಟು ನೀರು ಶೇಖರಣೆಯಾಗಿದೆ. ಇನ್ನೂ ಡ್ಯಾಂನ ಒಳಹರಿವಿನ ಪ್ರಮಾಣದಲ್ಲೂ ಭಾರೀ ಏರಿಕೆ ಕಂಡಿದೆ. ಸದ್ಯ ಡ್ಯಾಂಗೆ 29,552 ಕ್ಯೂಸೆಕ್ ನೀರು ಒಳಹರಿವಿದ್ದು, ಹೊರಹರಿವು 5,297 ಕ್ಯೂಸೆಕ್ ನಷ್ಟಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…