ಜಲಸಂರಕ್ಷಣೆಗೆ ಒಂದು ಮಾದರಿ | ಎರಡು ಗಂಟೆ ಕೆಲಸದಲ್ಲಿ ಪುಟಾಣಿ ಕಟ್ಟ | ಬಾವಿ ನೀರು ಏರಿಕೆ |

January 30, 2023
10:17 AM

ಬೇಸಗೆ ಆರಂಭವಾಯಿತು. ಕೆರೆ, ಬಾವಿಯಲ್ಲಿ  ನೀರಿನ ಮಟ್ಟ ಕಡಿಮೆಯಾಗುವ ಹೊತ್ತು ಆರಂಭವಾಯಿತು. ಈಗ ಜಲಸಂರಕ್ಷಣೆಯ ಪಾಠಗಳು ಅಗತ್ಯವಾಗಿದೆ. ಇದಕ್ಕೆ ಮಾದರಿಯಾಗಿ ಇಲ್ಲೊಂದು ಪುಟ್ಟ ಕಟ್ಟ ರಚನೆ ಮಾಡಿ ಓಡುವ ನೀರನ್ನು ನಿಲ್ಲುವಂತೆ ಮಾಡಿ ಬಾವಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಮಾದರಿಯೊಂದು ಇದೆ.

ಸುಳ್ಯ ತಾಲೂಕಿನ ಅಮರಮುಡ್ನೂರು  ಗ್ರಾಮದ ಕಟ್ಟದಮಜಲಿನ ಶಿವರಾಮ ಪೈಲೂರು ಅವರ  ಮನೆಯ ಬಾವಿಯಲ್ಲಿ ನೀರಿಗೆ ತತ್ವಾರ ಆಗುತ್ತದೆ. ಬಾವಿಯ  ತಳ ಭಾಗ 30 ಅಡಿ ದೂರದಲ್ಲಿ ಹರಿಯುವ ಸಣ್ಣ ತೋಡಿನ ಮಟ್ಟಕ್ಕೆ ಸಮಾನವಾಗಿದೆ. ಈ ಹಿನ್ನೆಲೆಯಲ್ಲಿ ತೋಡಿನ ಹರಿವಿಗೆ ತಡೆಯೊಡ್ಡುವ ಯೋಚನೆ ಮಾಡಿದರು. ಆ ಕಟ್ಟದಲ್ಲಿ ನೀರು ಏರುವಂತೆ ಬಾವಿಯಲ್ಲೂ ನೀರಿನ ಮಟ್ಟ ಏರಿಕೆಯಾಯಿತು. ಇದರಿಂದ ಒಂದಷ್ಟು ನೀರು ರಿಸರ್ವ್‌ ಆಗಿ ಉಳಿಯಿತು. ನೀರು ಬತ್ತು ಅವಧಿ ಮುಂದಕ್ಕೆ ಹೋಯಿತು.

ಈ ಪುಟ್ಟ ಕಟ್ಟ ರಚನೆಗೆ ಸರಳ ವಿಧಾನ. ಮೂವರು ಕೃಷಿ ಸಹಾಯಕರೊಂದಿಗೆ ಎರಡು ಗಂಟೆ ಕೆಲಸ. ಸುಮಾರು 20 ಗೊಬ್ಬರದ ಚೀಲಗಳಿಗೆ ತೋಡಿನ ಮಣ್ಣುಮಿಶ್ರಿತ ಮರಳು ತುಂಬಿ ಪೇರಿಸಿದ್ದರು. ಎದುರಿಗೆ ತುಂಡು ಕಲ್ಲುಗಳನ್ನು ಇಟ್ಟು ಮಣ್ಣು ತುಂಬಿ ಭದ್ರಪಡಿಸಿ , ಇನ್ನೊಂದು ಬದಿಗೆ ಹಳೆಯ ತೆಂಗಿನ ಮರದ ಬೊಡ್ಡೆಗಳನ್ನು ಜೋಡಿಸಿ ಪುಟಾಣಿ ಕಟ್ಟ ರೂಪುಗೊಂಡಿತು. ಈ ಕಟ್ಟದ ಮುನ್ನ, ಇನ್ನೊಂದು ಸಣ್ಣ ತಡೆ. ಅಲ್ಲಿಗೂ ತೆಂಗಿನ ಬೊಡ್ಡೆಗಳೇ ಆಧಾರ. ಈ ಪ್ರಯೋಗ ಬಾವಿಯಲ್ಲಿ ಜಲಮಟ್ಟ ಹೆಚ್ಚಿಸಲು ಸಹಕಾರಿಯಾಗಬಹುದೆಂಬ ಆಶಾಭಾವ. ಪಕ್ಕದಲ್ಲಿರುವ ತೋಟಕ್ಕೂ ಪ್ರಯೋಜನ ಆದೀತು ಎಂದು ಹೇಳುತ್ತಾರೆ ಶಿವರಾಂ ಪೈಲೂರು.

ಈ ಮಾದರಿಗೆ ಪ್ರೇರಣೆಯಾದ್ದು ಸದಾ ನೀರೆಚ್ಚರ ಮೂಡಿಸುವುದರ ಜತೆಗೆ ಪ್ರೇರಣೆ ನೀಡುತ್ತಿರುವ ನೀರ ನೆಮ್ಮದಿಯತ್ತ ಪಡ್ರೆ ಎನ್ನುವ  ವಾಟ್ಸಪ್ ಗುಂಪು ಎಂದು ಹೇಳಲು ಮರೆಯುವುದಿಲ್ಲ ಶಿವರಾಮ ಪೈಲೂರು ಅವರು. ಇದೇ ರೀತಿ ಇನ್ನೂ ಹಲವು ಕಡೆಗಳಲ್ಲಿ ಪುಟಾಣಿ ಕಟ್ಟಗಳ ರಚನೆ ಮಾಡುವ ಮೂಲಕ ಜಲಸಂರಕ್ಷಣೆ, ಹರಿಯುವ ನೀರಿನ ಬಳಕೆ,  ಒರತೆ, ಕೊಳವೆಬಾವಿ ನೀರನ್ನು ರಿಸರ್ವ್‌ ಆಗಿಡುವ ಪ್ರಯತ್ನ ಮಾಡಬಹುದು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?
May 16, 2026
2:33 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror