MIRROR FOCUS

ಜಲಸಂರಕ್ಷಣೆಗೆ ಒಂದು ಮಾದರಿ | ಎರಡು ಗಂಟೆ ಕೆಲಸದಲ್ಲಿ ಪುಟಾಣಿ ಕಟ್ಟ | ಬಾವಿ ನೀರು ಏರಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೇಸಗೆ ಆರಂಭವಾಯಿತು. ಕೆರೆ, ಬಾವಿಯಲ್ಲಿ  ನೀರಿನ ಮಟ್ಟ ಕಡಿಮೆಯಾಗುವ ಹೊತ್ತು ಆರಂಭವಾಯಿತು. ಈಗ ಜಲಸಂರಕ್ಷಣೆಯ ಪಾಠಗಳು ಅಗತ್ಯವಾಗಿದೆ. ಇದಕ್ಕೆ ಮಾದರಿಯಾಗಿ ಇಲ್ಲೊಂದು ಪುಟ್ಟ ಕಟ್ಟ ರಚನೆ ಮಾಡಿ ಓಡುವ ನೀರನ್ನು ನಿಲ್ಲುವಂತೆ ಮಾಡಿ ಬಾವಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಮಾದರಿಯೊಂದು ಇದೆ.

Advertisement

ಸುಳ್ಯ ತಾಲೂಕಿನ ಅಮರಮುಡ್ನೂರು  ಗ್ರಾಮದ ಕಟ್ಟದಮಜಲಿನ ಶಿವರಾಮ ಪೈಲೂರು ಅವರ  ಮನೆಯ ಬಾವಿಯಲ್ಲಿ ನೀರಿಗೆ ತತ್ವಾರ ಆಗುತ್ತದೆ. ಬಾವಿಯ  ತಳ ಭಾಗ 30 ಅಡಿ ದೂರದಲ್ಲಿ ಹರಿಯುವ ಸಣ್ಣ ತೋಡಿನ ಮಟ್ಟಕ್ಕೆ ಸಮಾನವಾಗಿದೆ. ಈ ಹಿನ್ನೆಲೆಯಲ್ಲಿ ತೋಡಿನ ಹರಿವಿಗೆ ತಡೆಯೊಡ್ಡುವ ಯೋಚನೆ ಮಾಡಿದರು. ಆ ಕಟ್ಟದಲ್ಲಿ ನೀರು ಏರುವಂತೆ ಬಾವಿಯಲ್ಲೂ ನೀರಿನ ಮಟ್ಟ ಏರಿಕೆಯಾಯಿತು. ಇದರಿಂದ ಒಂದಷ್ಟು ನೀರು ರಿಸರ್ವ್‌ ಆಗಿ ಉಳಿಯಿತು. ನೀರು ಬತ್ತು ಅವಧಿ ಮುಂದಕ್ಕೆ ಹೋಯಿತು.

ಈ ಪುಟ್ಟ ಕಟ್ಟ ರಚನೆಗೆ ಸರಳ ವಿಧಾನ. ಮೂವರು ಕೃಷಿ ಸಹಾಯಕರೊಂದಿಗೆ ಎರಡು ಗಂಟೆ ಕೆಲಸ. ಸುಮಾರು 20 ಗೊಬ್ಬರದ ಚೀಲಗಳಿಗೆ ತೋಡಿನ ಮಣ್ಣುಮಿಶ್ರಿತ ಮರಳು ತುಂಬಿ ಪೇರಿಸಿದ್ದರು. ಎದುರಿಗೆ ತುಂಡು ಕಲ್ಲುಗಳನ್ನು ಇಟ್ಟು ಮಣ್ಣು ತುಂಬಿ ಭದ್ರಪಡಿಸಿ , ಇನ್ನೊಂದು ಬದಿಗೆ ಹಳೆಯ ತೆಂಗಿನ ಮರದ ಬೊಡ್ಡೆಗಳನ್ನು ಜೋಡಿಸಿ ಪುಟಾಣಿ ಕಟ್ಟ ರೂಪುಗೊಂಡಿತು. ಈ ಕಟ್ಟದ ಮುನ್ನ, ಇನ್ನೊಂದು ಸಣ್ಣ ತಡೆ. ಅಲ್ಲಿಗೂ ತೆಂಗಿನ ಬೊಡ್ಡೆಗಳೇ ಆಧಾರ. ಈ ಪ್ರಯೋಗ ಬಾವಿಯಲ್ಲಿ ಜಲಮಟ್ಟ ಹೆಚ್ಚಿಸಲು ಸಹಕಾರಿಯಾಗಬಹುದೆಂಬ ಆಶಾಭಾವ. ಪಕ್ಕದಲ್ಲಿರುವ ತೋಟಕ್ಕೂ ಪ್ರಯೋಜನ ಆದೀತು ಎಂದು ಹೇಳುತ್ತಾರೆ ಶಿವರಾಂ ಪೈಲೂರು.

ಈ ಮಾದರಿಗೆ ಪ್ರೇರಣೆಯಾದ್ದು ಸದಾ ನೀರೆಚ್ಚರ ಮೂಡಿಸುವುದರ ಜತೆಗೆ ಪ್ರೇರಣೆ ನೀಡುತ್ತಿರುವ ನೀರ ನೆಮ್ಮದಿಯತ್ತ ಪಡ್ರೆ ಎನ್ನುವ  ವಾಟ್ಸಪ್ ಗುಂಪು ಎಂದು ಹೇಳಲು ಮರೆಯುವುದಿಲ್ಲ ಶಿವರಾಮ ಪೈಲೂರು ಅವರು. ಇದೇ ರೀತಿ ಇನ್ನೂ ಹಲವು ಕಡೆಗಳಲ್ಲಿ ಪುಟಾಣಿ ಕಟ್ಟಗಳ ರಚನೆ ಮಾಡುವ ಮೂಲಕ ಜಲಸಂರಕ್ಷಣೆ, ಹರಿಯುವ ನೀರಿನ ಬಳಕೆ,  ಒರತೆ, ಕೊಳವೆಬಾವಿ ನೀರನ್ನು ರಿಸರ್ವ್‌ ಆಗಿಡುವ ಪ್ರಯತ್ನ ಮಾಡಬಹುದು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ…

10 hours ago

ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…

20 hours ago

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

24 hours ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

1 day ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

1 day ago