Advertisement
MIRROR FOCUS

ಜಲಸಂರಕ್ಷಣೆಗೆ ಒಂದು ಮಾದರಿ | ಎರಡು ಗಂಟೆ ಕೆಲಸದಲ್ಲಿ ಪುಟಾಣಿ ಕಟ್ಟ | ಬಾವಿ ನೀರು ಏರಿಕೆ |

Share

ಬೇಸಗೆ ಆರಂಭವಾಯಿತು. ಕೆರೆ, ಬಾವಿಯಲ್ಲಿ  ನೀರಿನ ಮಟ್ಟ ಕಡಿಮೆಯಾಗುವ ಹೊತ್ತು ಆರಂಭವಾಯಿತು. ಈಗ ಜಲಸಂರಕ್ಷಣೆಯ ಪಾಠಗಳು ಅಗತ್ಯವಾಗಿದೆ. ಇದಕ್ಕೆ ಮಾದರಿಯಾಗಿ ಇಲ್ಲೊಂದು ಪುಟ್ಟ ಕಟ್ಟ ರಚನೆ ಮಾಡಿ ಓಡುವ ನೀರನ್ನು ನಿಲ್ಲುವಂತೆ ಮಾಡಿ ಬಾವಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಮಾದರಿಯೊಂದು ಇದೆ.

ಸುಳ್ಯ ತಾಲೂಕಿನ ಅಮರಮುಡ್ನೂರು  ಗ್ರಾಮದ ಕಟ್ಟದಮಜಲಿನ ಶಿವರಾಮ ಪೈಲೂರು ಅವರ  ಮನೆಯ ಬಾವಿಯಲ್ಲಿ ನೀರಿಗೆ ತತ್ವಾರ ಆಗುತ್ತದೆ. ಬಾವಿಯ  ತಳ ಭಾಗ 30 ಅಡಿ ದೂರದಲ್ಲಿ ಹರಿಯುವ ಸಣ್ಣ ತೋಡಿನ ಮಟ್ಟಕ್ಕೆ ಸಮಾನವಾಗಿದೆ. ಈ ಹಿನ್ನೆಲೆಯಲ್ಲಿ ತೋಡಿನ ಹರಿವಿಗೆ ತಡೆಯೊಡ್ಡುವ ಯೋಚನೆ ಮಾಡಿದರು. ಆ ಕಟ್ಟದಲ್ಲಿ ನೀರು ಏರುವಂತೆ ಬಾವಿಯಲ್ಲೂ ನೀರಿನ ಮಟ್ಟ ಏರಿಕೆಯಾಯಿತು. ಇದರಿಂದ ಒಂದಷ್ಟು ನೀರು ರಿಸರ್ವ್‌ ಆಗಿ ಉಳಿಯಿತು. ನೀರು ಬತ್ತು ಅವಧಿ ಮುಂದಕ್ಕೆ ಹೋಯಿತು.

ಈ ಪುಟ್ಟ ಕಟ್ಟ ರಚನೆಗೆ ಸರಳ ವಿಧಾನ. ಮೂವರು ಕೃಷಿ ಸಹಾಯಕರೊಂದಿಗೆ ಎರಡು ಗಂಟೆ ಕೆಲಸ. ಸುಮಾರು 20 ಗೊಬ್ಬರದ ಚೀಲಗಳಿಗೆ ತೋಡಿನ ಮಣ್ಣುಮಿಶ್ರಿತ ಮರಳು ತುಂಬಿ ಪೇರಿಸಿದ್ದರು. ಎದುರಿಗೆ ತುಂಡು ಕಲ್ಲುಗಳನ್ನು ಇಟ್ಟು ಮಣ್ಣು ತುಂಬಿ ಭದ್ರಪಡಿಸಿ , ಇನ್ನೊಂದು ಬದಿಗೆ ಹಳೆಯ ತೆಂಗಿನ ಮರದ ಬೊಡ್ಡೆಗಳನ್ನು ಜೋಡಿಸಿ ಪುಟಾಣಿ ಕಟ್ಟ ರೂಪುಗೊಂಡಿತು. ಈ ಕಟ್ಟದ ಮುನ್ನ, ಇನ್ನೊಂದು ಸಣ್ಣ ತಡೆ. ಅಲ್ಲಿಗೂ ತೆಂಗಿನ ಬೊಡ್ಡೆಗಳೇ ಆಧಾರ. ಈ ಪ್ರಯೋಗ ಬಾವಿಯಲ್ಲಿ ಜಲಮಟ್ಟ ಹೆಚ್ಚಿಸಲು ಸಹಕಾರಿಯಾಗಬಹುದೆಂಬ ಆಶಾಭಾವ. ಪಕ್ಕದಲ್ಲಿರುವ ತೋಟಕ್ಕೂ ಪ್ರಯೋಜನ ಆದೀತು ಎಂದು ಹೇಳುತ್ತಾರೆ ಶಿವರಾಂ ಪೈಲೂರು.

ಈ ಮಾದರಿಗೆ ಪ್ರೇರಣೆಯಾದ್ದು ಸದಾ ನೀರೆಚ್ಚರ ಮೂಡಿಸುವುದರ ಜತೆಗೆ ಪ್ರೇರಣೆ ನೀಡುತ್ತಿರುವ ನೀರ ನೆಮ್ಮದಿಯತ್ತ ಪಡ್ರೆ ಎನ್ನುವ  ವಾಟ್ಸಪ್ ಗುಂಪು ಎಂದು ಹೇಳಲು ಮರೆಯುವುದಿಲ್ಲ ಶಿವರಾಮ ಪೈಲೂರು ಅವರು. ಇದೇ ರೀತಿ ಇನ್ನೂ ಹಲವು ಕಡೆಗಳಲ್ಲಿ ಪುಟಾಣಿ ಕಟ್ಟಗಳ ರಚನೆ ಮಾಡುವ ಮೂಲಕ ಜಲಸಂರಕ್ಷಣೆ, ಹರಿಯುವ ನೀರಿನ ಬಳಕೆ,  ಒರತೆ, ಕೊಳವೆಬಾವಿ ನೀರನ್ನು ರಿಸರ್ವ್‌ ಆಗಿಡುವ ಪ್ರಯತ್ನ ಮಾಡಬಹುದು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

11 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago