Advertisement
MIRROR FOCUS

ಜಲಸಂರಕ್ಷಣೆಗೆ ಒಂದು ಮಾದರಿ | ಎರಡು ಗಂಟೆ ಕೆಲಸದಲ್ಲಿ ಪುಟಾಣಿ ಕಟ್ಟ | ಬಾವಿ ನೀರು ಏರಿಕೆ |

Share

ಬೇಸಗೆ ಆರಂಭವಾಯಿತು. ಕೆರೆ, ಬಾವಿಯಲ್ಲಿ  ನೀರಿನ ಮಟ್ಟ ಕಡಿಮೆಯಾಗುವ ಹೊತ್ತು ಆರಂಭವಾಯಿತು. ಈಗ ಜಲಸಂರಕ್ಷಣೆಯ ಪಾಠಗಳು ಅಗತ್ಯವಾಗಿದೆ. ಇದಕ್ಕೆ ಮಾದರಿಯಾಗಿ ಇಲ್ಲೊಂದು ಪುಟ್ಟ ಕಟ್ಟ ರಚನೆ ಮಾಡಿ ಓಡುವ ನೀರನ್ನು ನಿಲ್ಲುವಂತೆ ಮಾಡಿ ಬಾವಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಮಾದರಿಯೊಂದು ಇದೆ.

ಸುಳ್ಯ ತಾಲೂಕಿನ ಅಮರಮುಡ್ನೂರು  ಗ್ರಾಮದ ಕಟ್ಟದಮಜಲಿನ ಶಿವರಾಮ ಪೈಲೂರು ಅವರ  ಮನೆಯ ಬಾವಿಯಲ್ಲಿ ನೀರಿಗೆ ತತ್ವಾರ ಆಗುತ್ತದೆ. ಬಾವಿಯ  ತಳ ಭಾಗ 30 ಅಡಿ ದೂರದಲ್ಲಿ ಹರಿಯುವ ಸಣ್ಣ ತೋಡಿನ ಮಟ್ಟಕ್ಕೆ ಸಮಾನವಾಗಿದೆ. ಈ ಹಿನ್ನೆಲೆಯಲ್ಲಿ ತೋಡಿನ ಹರಿವಿಗೆ ತಡೆಯೊಡ್ಡುವ ಯೋಚನೆ ಮಾಡಿದರು. ಆ ಕಟ್ಟದಲ್ಲಿ ನೀರು ಏರುವಂತೆ ಬಾವಿಯಲ್ಲೂ ನೀರಿನ ಮಟ್ಟ ಏರಿಕೆಯಾಯಿತು. ಇದರಿಂದ ಒಂದಷ್ಟು ನೀರು ರಿಸರ್ವ್‌ ಆಗಿ ಉಳಿಯಿತು. ನೀರು ಬತ್ತು ಅವಧಿ ಮುಂದಕ್ಕೆ ಹೋಯಿತು.

ಈ ಪುಟ್ಟ ಕಟ್ಟ ರಚನೆಗೆ ಸರಳ ವಿಧಾನ. ಮೂವರು ಕೃಷಿ ಸಹಾಯಕರೊಂದಿಗೆ ಎರಡು ಗಂಟೆ ಕೆಲಸ. ಸುಮಾರು 20 ಗೊಬ್ಬರದ ಚೀಲಗಳಿಗೆ ತೋಡಿನ ಮಣ್ಣುಮಿಶ್ರಿತ ಮರಳು ತುಂಬಿ ಪೇರಿಸಿದ್ದರು. ಎದುರಿಗೆ ತುಂಡು ಕಲ್ಲುಗಳನ್ನು ಇಟ್ಟು ಮಣ್ಣು ತುಂಬಿ ಭದ್ರಪಡಿಸಿ , ಇನ್ನೊಂದು ಬದಿಗೆ ಹಳೆಯ ತೆಂಗಿನ ಮರದ ಬೊಡ್ಡೆಗಳನ್ನು ಜೋಡಿಸಿ ಪುಟಾಣಿ ಕಟ್ಟ ರೂಪುಗೊಂಡಿತು. ಈ ಕಟ್ಟದ ಮುನ್ನ, ಇನ್ನೊಂದು ಸಣ್ಣ ತಡೆ. ಅಲ್ಲಿಗೂ ತೆಂಗಿನ ಬೊಡ್ಡೆಗಳೇ ಆಧಾರ. ಈ ಪ್ರಯೋಗ ಬಾವಿಯಲ್ಲಿ ಜಲಮಟ್ಟ ಹೆಚ್ಚಿಸಲು ಸಹಕಾರಿಯಾಗಬಹುದೆಂಬ ಆಶಾಭಾವ. ಪಕ್ಕದಲ್ಲಿರುವ ತೋಟಕ್ಕೂ ಪ್ರಯೋಜನ ಆದೀತು ಎಂದು ಹೇಳುತ್ತಾರೆ ಶಿವರಾಂ ಪೈಲೂರು.

ಈ ಮಾದರಿಗೆ ಪ್ರೇರಣೆಯಾದ್ದು ಸದಾ ನೀರೆಚ್ಚರ ಮೂಡಿಸುವುದರ ಜತೆಗೆ ಪ್ರೇರಣೆ ನೀಡುತ್ತಿರುವ ನೀರ ನೆಮ್ಮದಿಯತ್ತ ಪಡ್ರೆ ಎನ್ನುವ  ವಾಟ್ಸಪ್ ಗುಂಪು ಎಂದು ಹೇಳಲು ಮರೆಯುವುದಿಲ್ಲ ಶಿವರಾಮ ಪೈಲೂರು ಅವರು. ಇದೇ ರೀತಿ ಇನ್ನೂ ಹಲವು ಕಡೆಗಳಲ್ಲಿ ಪುಟಾಣಿ ಕಟ್ಟಗಳ ರಚನೆ ಮಾಡುವ ಮೂಲಕ ಜಲಸಂರಕ್ಷಣೆ, ಹರಿಯುವ ನೀರಿನ ಬಳಕೆ,  ಒರತೆ, ಕೊಳವೆಬಾವಿ ನೀರನ್ನು ರಿಸರ್ವ್‌ ಆಗಿಡುವ ಪ್ರಯತ್ನ ಮಾಡಬಹುದು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

10 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

16 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

23 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

23 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

23 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

1 day ago