ಬೇಸಗೆ ಆರಂಭವಾಯಿತು. ಕೆರೆ, ಬಾವಿಯಲ್ಲಿ ನೀರಿನ ಮಟ್ಟ ಕಡಿಮೆಯಾಗುವ ಹೊತ್ತು ಆರಂಭವಾಯಿತು. ಈಗ ಜಲಸಂರಕ್ಷಣೆಯ ಪಾಠಗಳು ಅಗತ್ಯವಾಗಿದೆ. ಇದಕ್ಕೆ ಮಾದರಿಯಾಗಿ ಇಲ್ಲೊಂದು ಪುಟ್ಟ ಕಟ್ಟ ರಚನೆ ಮಾಡಿ ಓಡುವ ನೀರನ್ನು ನಿಲ್ಲುವಂತೆ ಮಾಡಿ ಬಾವಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಮಾದರಿಯೊಂದು ಇದೆ.
ಸುಳ್ಯ ತಾಲೂಕಿನ ಅಮರಮುಡ್ನೂರು ಗ್ರಾಮದ ಕಟ್ಟದಮಜಲಿನ ಶಿವರಾಮ ಪೈಲೂರು ಅವರ ಮನೆಯ ಬಾವಿಯಲ್ಲಿ ನೀರಿಗೆ ತತ್ವಾರ ಆಗುತ್ತದೆ. ಬಾವಿಯ ತಳ ಭಾಗ 30 ಅಡಿ ದೂರದಲ್ಲಿ ಹರಿಯುವ ಸಣ್ಣ ತೋಡಿನ ಮಟ್ಟಕ್ಕೆ ಸಮಾನವಾಗಿದೆ. ಈ ಹಿನ್ನೆಲೆಯಲ್ಲಿ ತೋಡಿನ ಹರಿವಿಗೆ ತಡೆಯೊಡ್ಡುವ ಯೋಚನೆ ಮಾಡಿದರು. ಆ ಕಟ್ಟದಲ್ಲಿ ನೀರು ಏರುವಂತೆ ಬಾವಿಯಲ್ಲೂ ನೀರಿನ ಮಟ್ಟ ಏರಿಕೆಯಾಯಿತು. ಇದರಿಂದ ಒಂದಷ್ಟು ನೀರು ರಿಸರ್ವ್ ಆಗಿ ಉಳಿಯಿತು. ನೀರು ಬತ್ತು ಅವಧಿ ಮುಂದಕ್ಕೆ ಹೋಯಿತು.
ಈ ಪುಟ್ಟ ಕಟ್ಟ ರಚನೆಗೆ ಸರಳ ವಿಧಾನ. ಮೂವರು ಕೃಷಿ ಸಹಾಯಕರೊಂದಿಗೆ ಎರಡು ಗಂಟೆ ಕೆಲಸ. ಸುಮಾರು 20 ಗೊಬ್ಬರದ ಚೀಲಗಳಿಗೆ ತೋಡಿನ ಮಣ್ಣುಮಿಶ್ರಿತ ಮರಳು ತುಂಬಿ ಪೇರಿಸಿದ್ದರು. ಎದುರಿಗೆ ತುಂಡು ಕಲ್ಲುಗಳನ್ನು ಇಟ್ಟು ಮಣ್ಣು ತುಂಬಿ ಭದ್ರಪಡಿಸಿ , ಇನ್ನೊಂದು ಬದಿಗೆ ಹಳೆಯ ತೆಂಗಿನ ಮರದ ಬೊಡ್ಡೆಗಳನ್ನು ಜೋಡಿಸಿ ಪುಟಾಣಿ ಕಟ್ಟ ರೂಪುಗೊಂಡಿತು. ಈ ಕಟ್ಟದ ಮುನ್ನ, ಇನ್ನೊಂದು ಸಣ್ಣ ತಡೆ. ಅಲ್ಲಿಗೂ ತೆಂಗಿನ ಬೊಡ್ಡೆಗಳೇ ಆಧಾರ. ಈ ಪ್ರಯೋಗ ಬಾವಿಯಲ್ಲಿ ಜಲಮಟ್ಟ ಹೆಚ್ಚಿಸಲು ಸಹಕಾರಿಯಾಗಬಹುದೆಂಬ ಆಶಾಭಾವ. ಪಕ್ಕದಲ್ಲಿರುವ ತೋಟಕ್ಕೂ ಪ್ರಯೋಜನ ಆದೀತು ಎಂದು ಹೇಳುತ್ತಾರೆ ಶಿವರಾಂ ಪೈಲೂರು.
ಈ ಮಾದರಿಗೆ ಪ್ರೇರಣೆಯಾದ್ದು ಸದಾ ನೀರೆಚ್ಚರ ಮೂಡಿಸುವುದರ ಜತೆಗೆ ಪ್ರೇರಣೆ ನೀಡುತ್ತಿರುವ ನೀರ ನೆಮ್ಮದಿಯತ್ತ ಪಡ್ರೆ ಎನ್ನುವ ವಾಟ್ಸಪ್ ಗುಂಪು ಎಂದು ಹೇಳಲು ಮರೆಯುವುದಿಲ್ಲ ಶಿವರಾಮ ಪೈಲೂರು ಅವರು. ಇದೇ ರೀತಿ ಇನ್ನೂ ಹಲವು ಕಡೆಗಳಲ್ಲಿ ಪುಟಾಣಿ ಕಟ್ಟಗಳ ರಚನೆ ಮಾಡುವ ಮೂಲಕ ಜಲಸಂರಕ್ಷಣೆ, ಹರಿಯುವ ನೀರಿನ ಬಳಕೆ, ಒರತೆ, ಕೊಳವೆಬಾವಿ ನೀರನ್ನು ರಿಸರ್ವ್ ಆಗಿಡುವ ಪ್ರಯತ್ನ ಮಾಡಬಹುದು.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…