ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಸೂಚಿಸಿದ್ದಾರೆ.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಪ್ರತಿ ಅಂಗನವಾಡಿ ಮತ್ತು ಶಾಲೆಗಳ ಕುಡಿಯುವ ನೀರಿನ ಘಟಕವನ್ನು ಆದ್ಯತೆಯಲ್ಲಿ ತಪಾಸಣೆ ನಡೆಸಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕರು ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಇದರ ಉಸ್ತುವಾರಿ ವಹಿಸಬೇಕು. ಅದೇ ರೀತಿ ಅಂಗನವಾಡಿ ಮತ್ತು ಶಾಲೆಗಳ ಕುಡಿಯುವ ನೀರಿನ ಟ್ಯಾಂಕ್ಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕು. ಇದಕ್ಕಾಗಿ ಗ್ರಾಮ ಪಂಚಾಯತ್ಗಳ ನೀರು ಗಂಟಿಗಳನ್ನು (ವಾಟರ್ ಮ್ಯಾನ್) ಬಳಸಿಕೊಳ್ಳುವಂತೆ ಸೂಚಿಸಿದರು. ಈ ಸಂಬಂಧ ಜಿಪಿಎಸ್ ಫೋಟೋ ತೆಗೆದು ಪ್ರತಿ ಶಾಲೆಯಲ್ಲಿ ಇಟ್ಟುಕೊಂಡು ತಪಾಸಣೆ ವೇಳೆ ಪರಿಶೀಲಿಸಬೇಕು ಎಂದು ಅವರು ನಿರ್ದೇಶಿಸಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಕಾರ್ಯಪಾಲಕ ಅಭಿಯಂತರ ಜೈಪ್ರಕಾಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ, ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡ, ಸಣ್ಣ ನೀರಾವರಿ ಇಲಾಖೆ ಎಇಇ ತಾಜುದ್ದೀನ್ ಉಬೈದ್ ಮತ್ತಿತರರು ಇದ್ದರು.
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…