ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಸೂಚಿಸಿದ್ದಾರೆ.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಪ್ರತಿ ಅಂಗನವಾಡಿ ಮತ್ತು ಶಾಲೆಗಳ ಕುಡಿಯುವ ನೀರಿನ ಘಟಕವನ್ನು ಆದ್ಯತೆಯಲ್ಲಿ ತಪಾಸಣೆ ನಡೆಸಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆ ಉಪ ನಿರ್ದೇಶಕರು ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಇದರ ಉಸ್ತುವಾರಿ ವಹಿಸಬೇಕು. ಅದೇ ರೀತಿ ಅಂಗನವಾಡಿ ಮತ್ತು ಶಾಲೆಗಳ ಕುಡಿಯುವ ನೀರಿನ ಟ್ಯಾಂಕ್ಗಳನ್ನು ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಚ್ಛಗೊಳಿಸಬೇಕು. ಇದಕ್ಕಾಗಿ ಗ್ರಾಮ ಪಂಚಾಯತ್ಗಳ ನೀರು ಗಂಟಿಗಳನ್ನು (ವಾಟರ್ ಮ್ಯಾನ್) ಬಳಸಿಕೊಳ್ಳುವಂತೆ ಸೂಚಿಸಿದರು. ಈ ಸಂಬಂಧ ಜಿಪಿಎಸ್ ಫೋಟೋ ತೆಗೆದು ಪ್ರತಿ ಶಾಲೆಯಲ್ಲಿ ಇಟ್ಟುಕೊಂಡು ತಪಾಸಣೆ ವೇಳೆ ಪರಿಶೀಲಿಸಬೇಕು ಎಂದು ಅವರು ನಿರ್ದೇಶಿಸಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಕಾರ್ಯಪಾಲಕ ಅಭಿಯಂತರ ಜೈಪ್ರಕಾಶ್, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ, ಜಂಟಿ ಕೃಷಿ ನಿರ್ದೇಶಕ ಹೊನ್ನಪ್ಪ ಗೌಡ, ಸಣ್ಣ ನೀರಾವರಿ ಇಲಾಖೆ ಎಇಇ ತಾಜುದ್ದೀನ್ ಉಬೈದ್ ಮತ್ತಿತರರು ಇದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…