ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

March 14, 2025
10:57 PM

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ. ಮಂಡಳಿಯ 7 ರಿಂದ 8 ಪೈಸೆಯಷ್ಟು ಏರಿಸಲು ಪ್ರಸ್ತಾಪ ಸಲ್ಲಿಸಿದ್ದು, ಈ ಬಗ್ಗೆ ಬೆಂಗಳೂರಿನ ಶಾಸಕರ ಬಳಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ವಿಷಯ ಪ್ರಸ್ತಾಪಿಸಿ, ಬೇಸಿಗೆ ಆರಂಭವಾಗುತ್ತಿದ್ದು, ಬೆಂಗಳೂರಿನ ಪೂರ್ವ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಶೀಘ್ರವೇ ಕಾವೇರಿ ನೀರು ಒದಗಿಸಬೇಕು ಎಂದು ಸದನದ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿ ಸಚಿವ ಡಿ.ಕೆ.ಶಿವಕುಮಾರ್, ವಸತಿ ಸಮುಚ್ಛಯಗಳು ಅನುಮತಿ ಪಡೆಯದೆ ಅಕ್ರಮವಾಗಿ ನೀರಿನ ಸಂಪರ್ಕ ಪಡೆದಿದ್ದು, ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.

ಏಕಾಏಕಿ ದೊಡ್ಡ ಮಟ್ಟದ ದರ  ಹೆಚ್ಚಳ ಮಾಡಬಾರದು ಎನ್ನುವ ಉದ್ದೇಶದಿಂದ ಒಂದು ಪೈಸೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದರು. 2014ರಿಂದ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಇದರಿಂದಾಗಿ  ಬೆಂಗಳೂರು ನೀರು ಸರಬರಾಜು ಮಂಡಳಿಗೆ  ಪ್ರತಿವರ್ಷ  ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ. ಸಿಬ್ಬಂದಿಗೂ ವೇತನ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ  ನೀರಿನ ದರ ಪರಿಷ್ಕರಣೆ  ಅನಿವಾರ್ಯ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror