ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಪರಿಷತ್ನಲ್ಲಿ ತಿಳಿಸಿದ್ದಾರೆ. ಮಂಡಳಿಯ 7 ರಿಂದ 8 ಪೈಸೆಯಷ್ಟು ಏರಿಸಲು ಪ್ರಸ್ತಾಪ ಸಲ್ಲಿಸಿದ್ದು, ಈ ಬಗ್ಗೆ ಬೆಂಗಳೂರಿನ ಶಾಸಕರ ಬಳಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ವಿಷಯ ಪ್ರಸ್ತಾಪಿಸಿ, ಬೇಸಿಗೆ ಆರಂಭವಾಗುತ್ತಿದ್ದು, ಬೆಂಗಳೂರಿನ ಪೂರ್ವ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಶೀಘ್ರವೇ ಕಾವೇರಿ ನೀರು ಒದಗಿಸಬೇಕು ಎಂದು ಸದನದ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿ ಸಚಿವ ಡಿ.ಕೆ.ಶಿವಕುಮಾರ್, ವಸತಿ ಸಮುಚ್ಛಯಗಳು ಅನುಮತಿ ಪಡೆಯದೆ ಅಕ್ರಮವಾಗಿ ನೀರಿನ ಸಂಪರ್ಕ ಪಡೆದಿದ್ದು, ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ಏಕಾಏಕಿ ದೊಡ್ಡ ಮಟ್ಟದ ದರ ಹೆಚ್ಚಳ ಮಾಡಬಾರದು ಎನ್ನುವ ಉದ್ದೇಶದಿಂದ ಒಂದು ಪೈಸೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದರು. 2014ರಿಂದ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಇದರಿಂದಾಗಿ ಬೆಂಗಳೂರು ನೀರು ಸರಬರಾಜು ಮಂಡಳಿಗೆ ಪ್ರತಿವರ್ಷ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ. ಸಿಬ್ಬಂದಿಗೂ ವೇತನ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ನೀರಿನ ದರ ಪರಿಷ್ಕರಣೆ ಅನಿವಾರ್ಯ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…