ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಪರಿಷತ್ನಲ್ಲಿ ತಿಳಿಸಿದ್ದಾರೆ. ಮಂಡಳಿಯ 7 ರಿಂದ 8 ಪೈಸೆಯಷ್ಟು ಏರಿಸಲು ಪ್ರಸ್ತಾಪ ಸಲ್ಲಿಸಿದ್ದು, ಈ ಬಗ್ಗೆ ಬೆಂಗಳೂರಿನ ಶಾಸಕರ ಬಳಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ. ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ವಿಷಯ ಪ್ರಸ್ತಾಪಿಸಿ, ಬೇಸಿಗೆ ಆರಂಭವಾಗುತ್ತಿದ್ದು, ಬೆಂಗಳೂರಿನ ಪೂರ್ವ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಶೀಘ್ರವೇ ಕಾವೇರಿ ನೀರು ಒದಗಿಸಬೇಕು ಎಂದು ಸದನದ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿ ಸಚಿವ ಡಿ.ಕೆ.ಶಿವಕುಮಾರ್, ವಸತಿ ಸಮುಚ್ಛಯಗಳು ಅನುಮತಿ ಪಡೆಯದೆ ಅಕ್ರಮವಾಗಿ ನೀರಿನ ಸಂಪರ್ಕ ಪಡೆದಿದ್ದು, ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ಏಕಾಏಕಿ ದೊಡ್ಡ ಮಟ್ಟದ ದರ ಹೆಚ್ಚಳ ಮಾಡಬಾರದು ಎನ್ನುವ ಉದ್ದೇಶದಿಂದ ಒಂದು ಪೈಸೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದರು. 2014ರಿಂದ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಇದರಿಂದಾಗಿ ಬೆಂಗಳೂರು ನೀರು ಸರಬರಾಜು ಮಂಡಳಿಗೆ ಪ್ರತಿವರ್ಷ ಕೋಟ್ಯಂತರ ರೂಪಾಯಿ ನಷ್ಟವಾಗುತ್ತಿದೆ. ಸಿಬ್ಬಂದಿಗೂ ವೇತನ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ನೀರಿನ ದರ ಪರಿಷ್ಕರಣೆ ಅನಿವಾರ್ಯ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…