ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!

March 29, 2024
3:03 PM
ಎಲ್ಲೆಡೆ ಈಗ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ನಗರಗಳಲ್ಲಿ ನೀರು ಸರಬರಾಜು ಜೊತೆಗೆ ವೆಚ್ಚವೂ ಅಧಿಕವಾಗುತ್ತಿದೆ. ಬೆಂಗಳೂರು ಕೂಡಾ ಅದೇ ಸಮಸ್ಯೆ ಎದುರಿಸುತ್ತಿದೆ

ಬಿಸಿಲ ಬೇಗೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಈ ಬಾರಿ ಸಂಕಷ್ಟ ರಾಜಧಾನಿ ಬೆಂಗಳೂರಿಗೆ. ಕುಡಿಯುವ ನೀರಿಗೆ ಸಂಕಷ್ಟವಾಗುತ್ತಿದೆ. ಈ ಬಾರಿ ಬೆಂಗಳೂರಿನಲ್ಲಿ ಜಲಮಂಡಳಿಗೆ ಸಂಕಷ್ಟವೇ ಸಂಕಷ್ಟ.ಈಗ ಆದಾಯಕ್ಕಿಂತ ಖರ್ಚು ಹೆಚ್ಚಾಗಿದೆ. ನಗರದ ಒಂದೂವರೆ ಕೋಟಿ ನಾಗರಿಕರಿಗೆ ಕುಡಿಯುವ ನೀರು ಪೂರೈಕೆಗೆ ಶತ ಪ್ರಯತ್ನ ನಡೆಸುತ್ತಿದೆ.

Advertisement
Advertisement

ನೀರಿಗಾಗಿ ರಾಜ್ಯದಲ್ಲಿ ಹಾಹಾಕಾರ ಶುರುವಾಗಿದೆ. ಬಹುತೇಕ ಎಲ್ಲಾ ಕಡೆಯೂ ನೀರಿನ ಸಮಸ್ಯೆ. ಅಂತರ್ಜಲ ಮಟ್ಟ ಕುಸಿತವಾಗಿದೆ.ಕೃಷಿಗೆ ನೀರಿನ ಸಮಸ್ಯೆ ಎಂದರು ಕೃಷಿಕರು ಹೇಳಿದರೆ, ಹಲವು ಕಡೆ ಕುಡಿಯುವ ನೀರಿಗೇ ಸಮಸ್ಯೆಯಾಗಿದೆ. ಗ್ರಾಮೀಣ ಭಾಗದಲ್ಲೂ ಯಥೇಚ್ಛವಾಗಿದ್ದ ನೀರು ಈಗ ಕಡಿಮೆಯಾಗತೊಡಗಿದೆ. ನಗರದ ಸಮಸ್ಯೆ ಕಠಿಣವಾಗಿದೆ. ನೀರಿಲ್ಲದೆ ದಿನ ಕಳೆಯುವುದೂ ಕಷ್ಟವೇ ಆಗಿದೆ. ಈಗೀಗ ಖರ್ಚುಗಳು ಹೆಚ್ಚಾಗುತ್ತಿದೆ. ನೀರಿನ ವೆಚ್ಚವೇ ನಗರದ ಆಡಳಿತಗಳಿಗೆ ಹೊರೆಯಾಗುತ್ತಿದೆ. ಬೆಂಗಳೂರು ಈಗ ಅದೇ ಸಮಸ್ಯೆ ಅನುಭವಿಸುತ್ತಿದೆ.

ಬೆಂಗಳೂರಿನ ಜಲಮಂಡಳಿಯು 10 ಲಕ್ಷಕ್ಕೂ ಅಧಿಕ ನೀರಿನ ಸಂಪರ್ಕಗಳನ್ನು ಹೊಂದಿದೆ. ಗ್ರಾಹಕರಿಂದ ಬಿಲ್ ರೂಪದಲ್ಲಿ ಸುಮಾರು 131 ಕೋಟಿ ರೂಪಾಯಿ ಪ್ರತಿ ತಿಂಗಳು ಸಂಗ್ರಹ ಮಾಡಲಾಗುತ್ತಿದೆ. ಈ ಪೈಕಿ 68 ಕೋಟಿ ರೂಪಾಯಿ ವಿದ್ಯುತ್ ಬಿಲ್‍ಗೆ ಪಾವತಿಯಾದರೆ 40 ಕೋಟಿಯಷ್ಟು ಮೊತ್ತ ಅಧಿಕಾರಿ ಸಿಬ್ಬಂದಿ ವೇತನಕ್ಕೆ ವ್ಯಯವಾಗುತ್ತಿದೆ. 10 ಕೋಟಿ ರೂಪಾಯಿ ಸಾಲ ಮರುಪಾವತಿಗಾಗಿ ಪ್ರತಿ ತಿಂಗಳು ಮೀಸಲಿಡಲಾಗಿದೆ. 15 ಕೋಟಿ ರೂಪಾಯಿ ಎಸ್ ಟಿಪಿಗಳ ನಿರ್ವಹಣೆಗೆ, 2 ಕೋಟಿ ರೂಪಾಯಿ ಆಡಳಿತ ವೆಚ್ಚ2.5 ಕೋಟಿ ರೂಪಾಯಿ ಅನ್ನು ನೀರಿನ ಸಂಸ್ಕರಣಾ ಘಟಕದ ನಿರ್ವಹಣೆಗೆ ಖರ್ಚು.ಇತರೆ ನಿರ್ವಹಣಾ ವೆಚ್ಚಕ್ಕೆ 7.5 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.ಹೀಗಾಗಿ ಈಗ ಆದಾಯಕ್ಕಿಂತ ಸುಮಾರು 15 ಕೋಟಿ ರೂಪಾಯಿ ಪ್ರತಿ ತಿಂಗಳು ವೆಚ್ಚ ಹೆಚ್ಚಾಗಿದೆ.

ನೀರು ಅತ್ಯಮೂಲ್ಯ ವಸ್ತುವಾಗಿದೆ. ಬಳಕೆಯಲ್ಲಿ ಮಿತಿ ಇರಲಿ, ಎಲ್ಲರಿಗೂ ನೀರು ಸಿಗುವಂತಾಗಲಿ. ಇದಕ್ಕಾಗಿ ಜಲಸಂರಕ್ಷಣೆಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಜನರೇ ಮಾಡಬೇಕಾದ ಅನಿವಾರ್ಯತೆ ಇದೆ. ಈ ಕೆಲಸ ಕೃಷಿಕರಿಂದ, ನಗರವಾಸಿಗಳಿಂದ ನಡೆಯಲಿದೆ.

Source : ಅಂತರ್ಜಾಲ

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group