MIRROR FOCUS

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಸಿಲ ಬೇಗೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಈ ಬಾರಿ ಸಂಕಷ್ಟ ರಾಜಧಾನಿ ಬೆಂಗಳೂರಿಗೆ. ಕುಡಿಯುವ ನೀರಿಗೆ ಸಂಕಷ್ಟವಾಗುತ್ತಿದೆ. ಈ ಬಾರಿ ಬೆಂಗಳೂರಿನಲ್ಲಿ ಜಲಮಂಡಳಿಗೆ ಸಂಕಷ್ಟವೇ ಸಂಕಷ್ಟ.ಈಗ ಆದಾಯಕ್ಕಿಂತ ಖರ್ಚು ಹೆಚ್ಚಾಗಿದೆ. ನಗರದ ಒಂದೂವರೆ ಕೋಟಿ ನಾಗರಿಕರಿಗೆ ಕುಡಿಯುವ ನೀರು ಪೂರೈಕೆಗೆ ಶತ ಪ್ರಯತ್ನ ನಡೆಸುತ್ತಿದೆ.

Advertisement
Advertisement

ನೀರಿಗಾಗಿ ರಾಜ್ಯದಲ್ಲಿ ಹಾಹಾಕಾರ ಶುರುವಾಗಿದೆ. ಬಹುತೇಕ ಎಲ್ಲಾ ಕಡೆಯೂ ನೀರಿನ ಸಮಸ್ಯೆ. ಅಂತರ್ಜಲ ಮಟ್ಟ ಕುಸಿತವಾಗಿದೆ.ಕೃಷಿಗೆ ನೀರಿನ ಸಮಸ್ಯೆ ಎಂದರು ಕೃಷಿಕರು ಹೇಳಿದರೆ, ಹಲವು ಕಡೆ ಕುಡಿಯುವ ನೀರಿಗೇ ಸಮಸ್ಯೆಯಾಗಿದೆ. ಗ್ರಾಮೀಣ ಭಾಗದಲ್ಲೂ ಯಥೇಚ್ಛವಾಗಿದ್ದ ನೀರು ಈಗ ಕಡಿಮೆಯಾಗತೊಡಗಿದೆ. ನಗರದ ಸಮಸ್ಯೆ ಕಠಿಣವಾಗಿದೆ. ನೀರಿಲ್ಲದೆ ದಿನ ಕಳೆಯುವುದೂ ಕಷ್ಟವೇ ಆಗಿದೆ. ಈಗೀಗ ಖರ್ಚುಗಳು ಹೆಚ್ಚಾಗುತ್ತಿದೆ. ನೀರಿನ ವೆಚ್ಚವೇ ನಗರದ ಆಡಳಿತಗಳಿಗೆ ಹೊರೆಯಾಗುತ್ತಿದೆ. ಬೆಂಗಳೂರು ಈಗ ಅದೇ ಸಮಸ್ಯೆ ಅನುಭವಿಸುತ್ತಿದೆ.

ಬೆಂಗಳೂರಿನ ಜಲಮಂಡಳಿಯು 10 ಲಕ್ಷಕ್ಕೂ ಅಧಿಕ ನೀರಿನ ಸಂಪರ್ಕಗಳನ್ನು ಹೊಂದಿದೆ. ಗ್ರಾಹಕರಿಂದ ಬಿಲ್ ರೂಪದಲ್ಲಿ ಸುಮಾರು 131 ಕೋಟಿ ರೂಪಾಯಿ ಪ್ರತಿ ತಿಂಗಳು ಸಂಗ್ರಹ ಮಾಡಲಾಗುತ್ತಿದೆ. ಈ ಪೈಕಿ 68 ಕೋಟಿ ರೂಪಾಯಿ ವಿದ್ಯುತ್ ಬಿಲ್‍ಗೆ ಪಾವತಿಯಾದರೆ 40 ಕೋಟಿಯಷ್ಟು ಮೊತ್ತ ಅಧಿಕಾರಿ ಸಿಬ್ಬಂದಿ ವೇತನಕ್ಕೆ ವ್ಯಯವಾಗುತ್ತಿದೆ. 10 ಕೋಟಿ ರೂಪಾಯಿ ಸಾಲ ಮರುಪಾವತಿಗಾಗಿ ಪ್ರತಿ ತಿಂಗಳು ಮೀಸಲಿಡಲಾಗಿದೆ. 15 ಕೋಟಿ ರೂಪಾಯಿ ಎಸ್ ಟಿಪಿಗಳ ನಿರ್ವಹಣೆಗೆ, 2 ಕೋಟಿ ರೂಪಾಯಿ ಆಡಳಿತ ವೆಚ್ಚ2.5 ಕೋಟಿ ರೂಪಾಯಿ ಅನ್ನು ನೀರಿನ ಸಂಸ್ಕರಣಾ ಘಟಕದ ನಿರ್ವಹಣೆಗೆ ಖರ್ಚು.ಇತರೆ ನಿರ್ವಹಣಾ ವೆಚ್ಚಕ್ಕೆ 7.5 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.ಹೀಗಾಗಿ ಈಗ ಆದಾಯಕ್ಕಿಂತ ಸುಮಾರು 15 ಕೋಟಿ ರೂಪಾಯಿ ಪ್ರತಿ ತಿಂಗಳು ವೆಚ್ಚ ಹೆಚ್ಚಾಗಿದೆ.

ನೀರು ಅತ್ಯಮೂಲ್ಯ ವಸ್ತುವಾಗಿದೆ. ಬಳಕೆಯಲ್ಲಿ ಮಿತಿ ಇರಲಿ, ಎಲ್ಲರಿಗೂ ನೀರು ಸಿಗುವಂತಾಗಲಿ. ಇದಕ್ಕಾಗಿ ಜಲಸಂರಕ್ಷಣೆಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಜನರೇ ಮಾಡಬೇಕಾದ ಅನಿವಾರ್ಯತೆ ಇದೆ. ಈ ಕೆಲಸ ಕೃಷಿಕರಿಂದ, ನಗರವಾಸಿಗಳಿಂದ ನಡೆಯಲಿದೆ.

Source : ಅಂತರ್ಜಾಲ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿನ್ನೆ ಸಂಜೆಯಿಂದ ಧಾರಾಕಾರ ಮಳೆಯಾಗುತ್ತಿದ,  ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.…

8 hours ago

ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ

ಸಿಂಧು ಜಲ ಒಪ್ಪಂದದ ಅಮಾನತ್ತಿನಿಂದ ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಹರಿಯಾಣ, ಪಂಜಾಬ್…

10 hours ago

ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

ಅಸ್ಸಾಂ ರೈಫಲ್ಸ್, ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್, ಚಂಫೈ ಅವರ ಸಹಯೋಗದೊಂದಿಗೆ ಮಿಜೋರಾಂನ ಚಂಫೈ…

14 hours ago

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು…

14 hours ago

ಹವಾಮಾನ ವರದಿ | 20.05.2025 |ಮೇ. 21ರಿಂದ ಕರಾವಳಿ ಭಾಗದಲ್ಲಿ ಮಳೆ ಕಡಿಮೆ ನಿರೀಕ್ಷೆ

21.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago

ಆರ್ದ್ರಾ ನಕ್ಷತ್ರಕ್ಕೆ ಗುರು | ಈ 7 ರಾಶಿಗೆ ಗುರು ಬಲ, ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

22 hours ago