Advertisement
MIRROR FOCUS

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!

Share

ಬಿಸಿಲ ಬೇಗೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಈ ಬಾರಿ ಸಂಕಷ್ಟ ರಾಜಧಾನಿ ಬೆಂಗಳೂರಿಗೆ. ಕುಡಿಯುವ ನೀರಿಗೆ ಸಂಕಷ್ಟವಾಗುತ್ತಿದೆ. ಈ ಬಾರಿ ಬೆಂಗಳೂರಿನಲ್ಲಿ ಜಲಮಂಡಳಿಗೆ ಸಂಕಷ್ಟವೇ ಸಂಕಷ್ಟ.ಈಗ ಆದಾಯಕ್ಕಿಂತ ಖರ್ಚು ಹೆಚ್ಚಾಗಿದೆ. ನಗರದ ಒಂದೂವರೆ ಕೋಟಿ ನಾಗರಿಕರಿಗೆ ಕುಡಿಯುವ ನೀರು ಪೂರೈಕೆಗೆ ಶತ ಪ್ರಯತ್ನ ನಡೆಸುತ್ತಿದೆ.

Advertisement
Advertisement

ನೀರಿಗಾಗಿ ರಾಜ್ಯದಲ್ಲಿ ಹಾಹಾಕಾರ ಶುರುವಾಗಿದೆ. ಬಹುತೇಕ ಎಲ್ಲಾ ಕಡೆಯೂ ನೀರಿನ ಸಮಸ್ಯೆ. ಅಂತರ್ಜಲ ಮಟ್ಟ ಕುಸಿತವಾಗಿದೆ.ಕೃಷಿಗೆ ನೀರಿನ ಸಮಸ್ಯೆ ಎಂದರು ಕೃಷಿಕರು ಹೇಳಿದರೆ, ಹಲವು ಕಡೆ ಕುಡಿಯುವ ನೀರಿಗೇ ಸಮಸ್ಯೆಯಾಗಿದೆ. ಗ್ರಾಮೀಣ ಭಾಗದಲ್ಲೂ ಯಥೇಚ್ಛವಾಗಿದ್ದ ನೀರು ಈಗ ಕಡಿಮೆಯಾಗತೊಡಗಿದೆ. ನಗರದ ಸಮಸ್ಯೆ ಕಠಿಣವಾಗಿದೆ. ನೀರಿಲ್ಲದೆ ದಿನ ಕಳೆಯುವುದೂ ಕಷ್ಟವೇ ಆಗಿದೆ. ಈಗೀಗ ಖರ್ಚುಗಳು ಹೆಚ್ಚಾಗುತ್ತಿದೆ. ನೀರಿನ ವೆಚ್ಚವೇ ನಗರದ ಆಡಳಿತಗಳಿಗೆ ಹೊರೆಯಾಗುತ್ತಿದೆ. ಬೆಂಗಳೂರು ಈಗ ಅದೇ ಸಮಸ್ಯೆ ಅನುಭವಿಸುತ್ತಿದೆ.

ಬೆಂಗಳೂರಿನ ಜಲಮಂಡಳಿಯು 10 ಲಕ್ಷಕ್ಕೂ ಅಧಿಕ ನೀರಿನ ಸಂಪರ್ಕಗಳನ್ನು ಹೊಂದಿದೆ. ಗ್ರಾಹಕರಿಂದ ಬಿಲ್ ರೂಪದಲ್ಲಿ ಸುಮಾರು 131 ಕೋಟಿ ರೂಪಾಯಿ ಪ್ರತಿ ತಿಂಗಳು ಸಂಗ್ರಹ ಮಾಡಲಾಗುತ್ತಿದೆ. ಈ ಪೈಕಿ 68 ಕೋಟಿ ರೂಪಾಯಿ ವಿದ್ಯುತ್ ಬಿಲ್‍ಗೆ ಪಾವತಿಯಾದರೆ 40 ಕೋಟಿಯಷ್ಟು ಮೊತ್ತ ಅಧಿಕಾರಿ ಸಿಬ್ಬಂದಿ ವೇತನಕ್ಕೆ ವ್ಯಯವಾಗುತ್ತಿದೆ. 10 ಕೋಟಿ ರೂಪಾಯಿ ಸಾಲ ಮರುಪಾವತಿಗಾಗಿ ಪ್ರತಿ ತಿಂಗಳು ಮೀಸಲಿಡಲಾಗಿದೆ. 15 ಕೋಟಿ ರೂಪಾಯಿ ಎಸ್ ಟಿಪಿಗಳ ನಿರ್ವಹಣೆಗೆ, 2 ಕೋಟಿ ರೂಪಾಯಿ ಆಡಳಿತ ವೆಚ್ಚ2.5 ಕೋಟಿ ರೂಪಾಯಿ ಅನ್ನು ನೀರಿನ ಸಂಸ್ಕರಣಾ ಘಟಕದ ನಿರ್ವಹಣೆಗೆ ಖರ್ಚು.ಇತರೆ ನಿರ್ವಹಣಾ ವೆಚ್ಚಕ್ಕೆ 7.5 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.ಹೀಗಾಗಿ ಈಗ ಆದಾಯಕ್ಕಿಂತ ಸುಮಾರು 15 ಕೋಟಿ ರೂಪಾಯಿ ಪ್ರತಿ ತಿಂಗಳು ವೆಚ್ಚ ಹೆಚ್ಚಾಗಿದೆ.

ನೀರು ಅತ್ಯಮೂಲ್ಯ ವಸ್ತುವಾಗಿದೆ. ಬಳಕೆಯಲ್ಲಿ ಮಿತಿ ಇರಲಿ, ಎಲ್ಲರಿಗೂ ನೀರು ಸಿಗುವಂತಾಗಲಿ. ಇದಕ್ಕಾಗಿ ಜಲಸಂರಕ್ಷಣೆಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಜನರೇ ಮಾಡಬೇಕಾದ ಅನಿವಾರ್ಯತೆ ಇದೆ. ಈ ಕೆಲಸ ಕೃಷಿಕರಿಂದ, ನಗರವಾಸಿಗಳಿಂದ ನಡೆಯಲಿದೆ.

Source : ಅಂತರ್ಜಾಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 hour ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago