MIRROR FOCUS

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!

Share

ಬಿಸಿಲ ಬೇಗೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಈ ಬಾರಿ ಸಂಕಷ್ಟ ರಾಜಧಾನಿ ಬೆಂಗಳೂರಿಗೆ. ಕುಡಿಯುವ ನೀರಿಗೆ ಸಂಕಷ್ಟವಾಗುತ್ತಿದೆ. ಈ ಬಾರಿ ಬೆಂಗಳೂರಿನಲ್ಲಿ ಜಲಮಂಡಳಿಗೆ ಸಂಕಷ್ಟವೇ ಸಂಕಷ್ಟ.ಈಗ ಆದಾಯಕ್ಕಿಂತ ಖರ್ಚು ಹೆಚ್ಚಾಗಿದೆ. ನಗರದ ಒಂದೂವರೆ ಕೋಟಿ ನಾಗರಿಕರಿಗೆ ಕುಡಿಯುವ ನೀರು ಪೂರೈಕೆಗೆ ಶತ ಪ್ರಯತ್ನ ನಡೆಸುತ್ತಿದೆ.

ನೀರಿಗಾಗಿ ರಾಜ್ಯದಲ್ಲಿ ಹಾಹಾಕಾರ ಶುರುವಾಗಿದೆ. ಬಹುತೇಕ ಎಲ್ಲಾ ಕಡೆಯೂ ನೀರಿನ ಸಮಸ್ಯೆ. ಅಂತರ್ಜಲ ಮಟ್ಟ ಕುಸಿತವಾಗಿದೆ.ಕೃಷಿಗೆ ನೀರಿನ ಸಮಸ್ಯೆ ಎಂದರು ಕೃಷಿಕರು ಹೇಳಿದರೆ, ಹಲವು ಕಡೆ ಕುಡಿಯುವ ನೀರಿಗೇ ಸಮಸ್ಯೆಯಾಗಿದೆ. ಗ್ರಾಮೀಣ ಭಾಗದಲ್ಲೂ ಯಥೇಚ್ಛವಾಗಿದ್ದ ನೀರು ಈಗ ಕಡಿಮೆಯಾಗತೊಡಗಿದೆ. ನಗರದ ಸಮಸ್ಯೆ ಕಠಿಣವಾಗಿದೆ. ನೀರಿಲ್ಲದೆ ದಿನ ಕಳೆಯುವುದೂ ಕಷ್ಟವೇ ಆಗಿದೆ. ಈಗೀಗ ಖರ್ಚುಗಳು ಹೆಚ್ಚಾಗುತ್ತಿದೆ. ನೀರಿನ ವೆಚ್ಚವೇ ನಗರದ ಆಡಳಿತಗಳಿಗೆ ಹೊರೆಯಾಗುತ್ತಿದೆ. ಬೆಂಗಳೂರು ಈಗ ಅದೇ ಸಮಸ್ಯೆ ಅನುಭವಿಸುತ್ತಿದೆ.

ಬೆಂಗಳೂರಿನ ಜಲಮಂಡಳಿಯು 10 ಲಕ್ಷಕ್ಕೂ ಅಧಿಕ ನೀರಿನ ಸಂಪರ್ಕಗಳನ್ನು ಹೊಂದಿದೆ. ಗ್ರಾಹಕರಿಂದ ಬಿಲ್ ರೂಪದಲ್ಲಿ ಸುಮಾರು 131 ಕೋಟಿ ರೂಪಾಯಿ ಪ್ರತಿ ತಿಂಗಳು ಸಂಗ್ರಹ ಮಾಡಲಾಗುತ್ತಿದೆ. ಈ ಪೈಕಿ 68 ಕೋಟಿ ರೂಪಾಯಿ ವಿದ್ಯುತ್ ಬಿಲ್‍ಗೆ ಪಾವತಿಯಾದರೆ 40 ಕೋಟಿಯಷ್ಟು ಮೊತ್ತ ಅಧಿಕಾರಿ ಸಿಬ್ಬಂದಿ ವೇತನಕ್ಕೆ ವ್ಯಯವಾಗುತ್ತಿದೆ. 10 ಕೋಟಿ ರೂಪಾಯಿ ಸಾಲ ಮರುಪಾವತಿಗಾಗಿ ಪ್ರತಿ ತಿಂಗಳು ಮೀಸಲಿಡಲಾಗಿದೆ. 15 ಕೋಟಿ ರೂಪಾಯಿ ಎಸ್ ಟಿಪಿಗಳ ನಿರ್ವಹಣೆಗೆ, 2 ಕೋಟಿ ರೂಪಾಯಿ ಆಡಳಿತ ವೆಚ್ಚ2.5 ಕೋಟಿ ರೂಪಾಯಿ ಅನ್ನು ನೀರಿನ ಸಂಸ್ಕರಣಾ ಘಟಕದ ನಿರ್ವಹಣೆಗೆ ಖರ್ಚು.ಇತರೆ ನಿರ್ವಹಣಾ ವೆಚ್ಚಕ್ಕೆ 7.5 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.ಹೀಗಾಗಿ ಈಗ ಆದಾಯಕ್ಕಿಂತ ಸುಮಾರು 15 ಕೋಟಿ ರೂಪಾಯಿ ಪ್ರತಿ ತಿಂಗಳು ವೆಚ್ಚ ಹೆಚ್ಚಾಗಿದೆ.

ನೀರು ಅತ್ಯಮೂಲ್ಯ ವಸ್ತುವಾಗಿದೆ. ಬಳಕೆಯಲ್ಲಿ ಮಿತಿ ಇರಲಿ, ಎಲ್ಲರಿಗೂ ನೀರು ಸಿಗುವಂತಾಗಲಿ. ಇದಕ್ಕಾಗಿ ಜಲಸಂರಕ್ಷಣೆಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಜನರೇ ಮಾಡಬೇಕಾದ ಅನಿವಾರ್ಯತೆ ಇದೆ. ಈ ಕೆಲಸ ಕೃಷಿಕರಿಂದ, ನಗರವಾಸಿಗಳಿಂದ ನಡೆಯಲಿದೆ.

Source : ಅಂತರ್ಜಾಲ

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |

ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…

3 hours ago

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…

3 hours ago

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ

ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…

3 hours ago

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

19 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

20 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

20 hours ago