MIRROR FOCUS

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಸಿಲ ಬೇಗೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಈ ಬಾರಿ ಸಂಕಷ್ಟ ರಾಜಧಾನಿ ಬೆಂಗಳೂರಿಗೆ. ಕುಡಿಯುವ ನೀರಿಗೆ ಸಂಕಷ್ಟವಾಗುತ್ತಿದೆ. ಈ ಬಾರಿ ಬೆಂಗಳೂರಿನಲ್ಲಿ ಜಲಮಂಡಳಿಗೆ ಸಂಕಷ್ಟವೇ ಸಂಕಷ್ಟ.ಈಗ ಆದಾಯಕ್ಕಿಂತ ಖರ್ಚು ಹೆಚ್ಚಾಗಿದೆ. ನಗರದ ಒಂದೂವರೆ ಕೋಟಿ ನಾಗರಿಕರಿಗೆ ಕುಡಿಯುವ ನೀರು ಪೂರೈಕೆಗೆ ಶತ ಪ್ರಯತ್ನ ನಡೆಸುತ್ತಿದೆ.

Advertisement

ನೀರಿಗಾಗಿ ರಾಜ್ಯದಲ್ಲಿ ಹಾಹಾಕಾರ ಶುರುವಾಗಿದೆ. ಬಹುತೇಕ ಎಲ್ಲಾ ಕಡೆಯೂ ನೀರಿನ ಸಮಸ್ಯೆ. ಅಂತರ್ಜಲ ಮಟ್ಟ ಕುಸಿತವಾಗಿದೆ.ಕೃಷಿಗೆ ನೀರಿನ ಸಮಸ್ಯೆ ಎಂದರು ಕೃಷಿಕರು ಹೇಳಿದರೆ, ಹಲವು ಕಡೆ ಕುಡಿಯುವ ನೀರಿಗೇ ಸಮಸ್ಯೆಯಾಗಿದೆ. ಗ್ರಾಮೀಣ ಭಾಗದಲ್ಲೂ ಯಥೇಚ್ಛವಾಗಿದ್ದ ನೀರು ಈಗ ಕಡಿಮೆಯಾಗತೊಡಗಿದೆ. ನಗರದ ಸಮಸ್ಯೆ ಕಠಿಣವಾಗಿದೆ. ನೀರಿಲ್ಲದೆ ದಿನ ಕಳೆಯುವುದೂ ಕಷ್ಟವೇ ಆಗಿದೆ. ಈಗೀಗ ಖರ್ಚುಗಳು ಹೆಚ್ಚಾಗುತ್ತಿದೆ. ನೀರಿನ ವೆಚ್ಚವೇ ನಗರದ ಆಡಳಿತಗಳಿಗೆ ಹೊರೆಯಾಗುತ್ತಿದೆ. ಬೆಂಗಳೂರು ಈಗ ಅದೇ ಸಮಸ್ಯೆ ಅನುಭವಿಸುತ್ತಿದೆ.

ಬೆಂಗಳೂರಿನ ಜಲಮಂಡಳಿಯು 10 ಲಕ್ಷಕ್ಕೂ ಅಧಿಕ ನೀರಿನ ಸಂಪರ್ಕಗಳನ್ನು ಹೊಂದಿದೆ. ಗ್ರಾಹಕರಿಂದ ಬಿಲ್ ರೂಪದಲ್ಲಿ ಸುಮಾರು 131 ಕೋಟಿ ರೂಪಾಯಿ ಪ್ರತಿ ತಿಂಗಳು ಸಂಗ್ರಹ ಮಾಡಲಾಗುತ್ತಿದೆ. ಈ ಪೈಕಿ 68 ಕೋಟಿ ರೂಪಾಯಿ ವಿದ್ಯುತ್ ಬಿಲ್‍ಗೆ ಪಾವತಿಯಾದರೆ 40 ಕೋಟಿಯಷ್ಟು ಮೊತ್ತ ಅಧಿಕಾರಿ ಸಿಬ್ಬಂದಿ ವೇತನಕ್ಕೆ ವ್ಯಯವಾಗುತ್ತಿದೆ. 10 ಕೋಟಿ ರೂಪಾಯಿ ಸಾಲ ಮರುಪಾವತಿಗಾಗಿ ಪ್ರತಿ ತಿಂಗಳು ಮೀಸಲಿಡಲಾಗಿದೆ. 15 ಕೋಟಿ ರೂಪಾಯಿ ಎಸ್ ಟಿಪಿಗಳ ನಿರ್ವಹಣೆಗೆ, 2 ಕೋಟಿ ರೂಪಾಯಿ ಆಡಳಿತ ವೆಚ್ಚ2.5 ಕೋಟಿ ರೂಪಾಯಿ ಅನ್ನು ನೀರಿನ ಸಂಸ್ಕರಣಾ ಘಟಕದ ನಿರ್ವಹಣೆಗೆ ಖರ್ಚು.ಇತರೆ ನಿರ್ವಹಣಾ ವೆಚ್ಚಕ್ಕೆ 7.5 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.ಹೀಗಾಗಿ ಈಗ ಆದಾಯಕ್ಕಿಂತ ಸುಮಾರು 15 ಕೋಟಿ ರೂಪಾಯಿ ಪ್ರತಿ ತಿಂಗಳು ವೆಚ್ಚ ಹೆಚ್ಚಾಗಿದೆ.

ನೀರು ಅತ್ಯಮೂಲ್ಯ ವಸ್ತುವಾಗಿದೆ. ಬಳಕೆಯಲ್ಲಿ ಮಿತಿ ಇರಲಿ, ಎಲ್ಲರಿಗೂ ನೀರು ಸಿಗುವಂತಾಗಲಿ. ಇದಕ್ಕಾಗಿ ಜಲಸಂರಕ್ಷಣೆಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಜನರೇ ಮಾಡಬೇಕಾದ ಅನಿವಾರ್ಯತೆ ಇದೆ. ಈ ಕೆಲಸ ಕೃಷಿಕರಿಂದ, ನಗರವಾಸಿಗಳಿಂದ ನಡೆಯಲಿದೆ.

Source : ಅಂತರ್ಜಾಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ…

6 hours ago

ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…

17 hours ago

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

20 hours ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

1 day ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

1 day ago