Advertisement
MIRROR FOCUS

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!

Share

ಬಿಸಿಲ ಬೇಗೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಈ ಬಾರಿ ಸಂಕಷ್ಟ ರಾಜಧಾನಿ ಬೆಂಗಳೂರಿಗೆ. ಕುಡಿಯುವ ನೀರಿಗೆ ಸಂಕಷ್ಟವಾಗುತ್ತಿದೆ. ಈ ಬಾರಿ ಬೆಂಗಳೂರಿನಲ್ಲಿ ಜಲಮಂಡಳಿಗೆ ಸಂಕಷ್ಟವೇ ಸಂಕಷ್ಟ.ಈಗ ಆದಾಯಕ್ಕಿಂತ ಖರ್ಚು ಹೆಚ್ಚಾಗಿದೆ. ನಗರದ ಒಂದೂವರೆ ಕೋಟಿ ನಾಗರಿಕರಿಗೆ ಕುಡಿಯುವ ನೀರು ಪೂರೈಕೆಗೆ ಶತ ಪ್ರಯತ್ನ ನಡೆಸುತ್ತಿದೆ.

ನೀರಿಗಾಗಿ ರಾಜ್ಯದಲ್ಲಿ ಹಾಹಾಕಾರ ಶುರುವಾಗಿದೆ. ಬಹುತೇಕ ಎಲ್ಲಾ ಕಡೆಯೂ ನೀರಿನ ಸಮಸ್ಯೆ. ಅಂತರ್ಜಲ ಮಟ್ಟ ಕುಸಿತವಾಗಿದೆ.ಕೃಷಿಗೆ ನೀರಿನ ಸಮಸ್ಯೆ ಎಂದರು ಕೃಷಿಕರು ಹೇಳಿದರೆ, ಹಲವು ಕಡೆ ಕುಡಿಯುವ ನೀರಿಗೇ ಸಮಸ್ಯೆಯಾಗಿದೆ. ಗ್ರಾಮೀಣ ಭಾಗದಲ್ಲೂ ಯಥೇಚ್ಛವಾಗಿದ್ದ ನೀರು ಈಗ ಕಡಿಮೆಯಾಗತೊಡಗಿದೆ. ನಗರದ ಸಮಸ್ಯೆ ಕಠಿಣವಾಗಿದೆ. ನೀರಿಲ್ಲದೆ ದಿನ ಕಳೆಯುವುದೂ ಕಷ್ಟವೇ ಆಗಿದೆ. ಈಗೀಗ ಖರ್ಚುಗಳು ಹೆಚ್ಚಾಗುತ್ತಿದೆ. ನೀರಿನ ವೆಚ್ಚವೇ ನಗರದ ಆಡಳಿತಗಳಿಗೆ ಹೊರೆಯಾಗುತ್ತಿದೆ. ಬೆಂಗಳೂರು ಈಗ ಅದೇ ಸಮಸ್ಯೆ ಅನುಭವಿಸುತ್ತಿದೆ.

ಬೆಂಗಳೂರಿನ ಜಲಮಂಡಳಿಯು 10 ಲಕ್ಷಕ್ಕೂ ಅಧಿಕ ನೀರಿನ ಸಂಪರ್ಕಗಳನ್ನು ಹೊಂದಿದೆ. ಗ್ರಾಹಕರಿಂದ ಬಿಲ್ ರೂಪದಲ್ಲಿ ಸುಮಾರು 131 ಕೋಟಿ ರೂಪಾಯಿ ಪ್ರತಿ ತಿಂಗಳು ಸಂಗ್ರಹ ಮಾಡಲಾಗುತ್ತಿದೆ. ಈ ಪೈಕಿ 68 ಕೋಟಿ ರೂಪಾಯಿ ವಿದ್ಯುತ್ ಬಿಲ್‍ಗೆ ಪಾವತಿಯಾದರೆ 40 ಕೋಟಿಯಷ್ಟು ಮೊತ್ತ ಅಧಿಕಾರಿ ಸಿಬ್ಬಂದಿ ವೇತನಕ್ಕೆ ವ್ಯಯವಾಗುತ್ತಿದೆ. 10 ಕೋಟಿ ರೂಪಾಯಿ ಸಾಲ ಮರುಪಾವತಿಗಾಗಿ ಪ್ರತಿ ತಿಂಗಳು ಮೀಸಲಿಡಲಾಗಿದೆ. 15 ಕೋಟಿ ರೂಪಾಯಿ ಎಸ್ ಟಿಪಿಗಳ ನಿರ್ವಹಣೆಗೆ, 2 ಕೋಟಿ ರೂಪಾಯಿ ಆಡಳಿತ ವೆಚ್ಚ2.5 ಕೋಟಿ ರೂಪಾಯಿ ಅನ್ನು ನೀರಿನ ಸಂಸ್ಕರಣಾ ಘಟಕದ ನಿರ್ವಹಣೆಗೆ ಖರ್ಚು.ಇತರೆ ನಿರ್ವಹಣಾ ವೆಚ್ಚಕ್ಕೆ 7.5 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.ಹೀಗಾಗಿ ಈಗ ಆದಾಯಕ್ಕಿಂತ ಸುಮಾರು 15 ಕೋಟಿ ರೂಪಾಯಿ ಪ್ರತಿ ತಿಂಗಳು ವೆಚ್ಚ ಹೆಚ್ಚಾಗಿದೆ.

ನೀರು ಅತ್ಯಮೂಲ್ಯ ವಸ್ತುವಾಗಿದೆ. ಬಳಕೆಯಲ್ಲಿ ಮಿತಿ ಇರಲಿ, ಎಲ್ಲರಿಗೂ ನೀರು ಸಿಗುವಂತಾಗಲಿ. ಇದಕ್ಕಾಗಿ ಜಲಸಂರಕ್ಷಣೆಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಜನರೇ ಮಾಡಬೇಕಾದ ಅನಿವಾರ್ಯತೆ ಇದೆ. ಈ ಕೆಲಸ ಕೃಷಿಕರಿಂದ, ನಗರವಾಸಿಗಳಿಂದ ನಡೆಯಲಿದೆ.

Source : ಅಂತರ್ಜಾಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

9 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

10 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

17 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

23 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

23 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago