Advertisement
MIRROR FOCUS

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!

Share

ಬಿಸಿಲ ಬೇಗೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಈ ಬಾರಿ ಸಂಕಷ್ಟ ರಾಜಧಾನಿ ಬೆಂಗಳೂರಿಗೆ. ಕುಡಿಯುವ ನೀರಿಗೆ ಸಂಕಷ್ಟವಾಗುತ್ತಿದೆ. ಈ ಬಾರಿ ಬೆಂಗಳೂರಿನಲ್ಲಿ ಜಲಮಂಡಳಿಗೆ ಸಂಕಷ್ಟವೇ ಸಂಕಷ್ಟ.ಈಗ ಆದಾಯಕ್ಕಿಂತ ಖರ್ಚು ಹೆಚ್ಚಾಗಿದೆ. ನಗರದ ಒಂದೂವರೆ ಕೋಟಿ ನಾಗರಿಕರಿಗೆ ಕುಡಿಯುವ ನೀರು ಪೂರೈಕೆಗೆ ಶತ ಪ್ರಯತ್ನ ನಡೆಸುತ್ತಿದೆ.

ನೀರಿಗಾಗಿ ರಾಜ್ಯದಲ್ಲಿ ಹಾಹಾಕಾರ ಶುರುವಾಗಿದೆ. ಬಹುತೇಕ ಎಲ್ಲಾ ಕಡೆಯೂ ನೀರಿನ ಸಮಸ್ಯೆ. ಅಂತರ್ಜಲ ಮಟ್ಟ ಕುಸಿತವಾಗಿದೆ.ಕೃಷಿಗೆ ನೀರಿನ ಸಮಸ್ಯೆ ಎಂದರು ಕೃಷಿಕರು ಹೇಳಿದರೆ, ಹಲವು ಕಡೆ ಕುಡಿಯುವ ನೀರಿಗೇ ಸಮಸ್ಯೆಯಾಗಿದೆ. ಗ್ರಾಮೀಣ ಭಾಗದಲ್ಲೂ ಯಥೇಚ್ಛವಾಗಿದ್ದ ನೀರು ಈಗ ಕಡಿಮೆಯಾಗತೊಡಗಿದೆ. ನಗರದ ಸಮಸ್ಯೆ ಕಠಿಣವಾಗಿದೆ. ನೀರಿಲ್ಲದೆ ದಿನ ಕಳೆಯುವುದೂ ಕಷ್ಟವೇ ಆಗಿದೆ. ಈಗೀಗ ಖರ್ಚುಗಳು ಹೆಚ್ಚಾಗುತ್ತಿದೆ. ನೀರಿನ ವೆಚ್ಚವೇ ನಗರದ ಆಡಳಿತಗಳಿಗೆ ಹೊರೆಯಾಗುತ್ತಿದೆ. ಬೆಂಗಳೂರು ಈಗ ಅದೇ ಸಮಸ್ಯೆ ಅನುಭವಿಸುತ್ತಿದೆ.

ಬೆಂಗಳೂರಿನ ಜಲಮಂಡಳಿಯು 10 ಲಕ್ಷಕ್ಕೂ ಅಧಿಕ ನೀರಿನ ಸಂಪರ್ಕಗಳನ್ನು ಹೊಂದಿದೆ. ಗ್ರಾಹಕರಿಂದ ಬಿಲ್ ರೂಪದಲ್ಲಿ ಸುಮಾರು 131 ಕೋಟಿ ರೂಪಾಯಿ ಪ್ರತಿ ತಿಂಗಳು ಸಂಗ್ರಹ ಮಾಡಲಾಗುತ್ತಿದೆ. ಈ ಪೈಕಿ 68 ಕೋಟಿ ರೂಪಾಯಿ ವಿದ್ಯುತ್ ಬಿಲ್‍ಗೆ ಪಾವತಿಯಾದರೆ 40 ಕೋಟಿಯಷ್ಟು ಮೊತ್ತ ಅಧಿಕಾರಿ ಸಿಬ್ಬಂದಿ ವೇತನಕ್ಕೆ ವ್ಯಯವಾಗುತ್ತಿದೆ. 10 ಕೋಟಿ ರೂಪಾಯಿ ಸಾಲ ಮರುಪಾವತಿಗಾಗಿ ಪ್ರತಿ ತಿಂಗಳು ಮೀಸಲಿಡಲಾಗಿದೆ. 15 ಕೋಟಿ ರೂಪಾಯಿ ಎಸ್ ಟಿಪಿಗಳ ನಿರ್ವಹಣೆಗೆ, 2 ಕೋಟಿ ರೂಪಾಯಿ ಆಡಳಿತ ವೆಚ್ಚ2.5 ಕೋಟಿ ರೂಪಾಯಿ ಅನ್ನು ನೀರಿನ ಸಂಸ್ಕರಣಾ ಘಟಕದ ನಿರ್ವಹಣೆಗೆ ಖರ್ಚು.ಇತರೆ ನಿರ್ವಹಣಾ ವೆಚ್ಚಕ್ಕೆ 7.5 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.ಹೀಗಾಗಿ ಈಗ ಆದಾಯಕ್ಕಿಂತ ಸುಮಾರು 15 ಕೋಟಿ ರೂಪಾಯಿ ಪ್ರತಿ ತಿಂಗಳು ವೆಚ್ಚ ಹೆಚ್ಚಾಗಿದೆ.

ನೀರು ಅತ್ಯಮೂಲ್ಯ ವಸ್ತುವಾಗಿದೆ. ಬಳಕೆಯಲ್ಲಿ ಮಿತಿ ಇರಲಿ, ಎಲ್ಲರಿಗೂ ನೀರು ಸಿಗುವಂತಾಗಲಿ. ಇದಕ್ಕಾಗಿ ಜಲಸಂರಕ್ಷಣೆಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಜನರೇ ಮಾಡಬೇಕಾದ ಅನಿವಾರ್ಯತೆ ಇದೆ. ಈ ಕೆಲಸ ಕೃಷಿಕರಿಂದ, ನಗರವಾಸಿಗಳಿಂದ ನಡೆಯಲಿದೆ.

Source : ಅಂತರ್ಜಾಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

5 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

5 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago