Advertisement
MIRROR FOCUS

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!

Share

ಬಿಸಿಲ ಬೇಗೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಈ ಬಾರಿ ಸಂಕಷ್ಟ ರಾಜಧಾನಿ ಬೆಂಗಳೂರಿಗೆ. ಕುಡಿಯುವ ನೀರಿಗೆ ಸಂಕಷ್ಟವಾಗುತ್ತಿದೆ. ಈ ಬಾರಿ ಬೆಂಗಳೂರಿನಲ್ಲಿ ಜಲಮಂಡಳಿಗೆ ಸಂಕಷ್ಟವೇ ಸಂಕಷ್ಟ.ಈಗ ಆದಾಯಕ್ಕಿಂತ ಖರ್ಚು ಹೆಚ್ಚಾಗಿದೆ. ನಗರದ ಒಂದೂವರೆ ಕೋಟಿ ನಾಗರಿಕರಿಗೆ ಕುಡಿಯುವ ನೀರು ಪೂರೈಕೆಗೆ ಶತ ಪ್ರಯತ್ನ ನಡೆಸುತ್ತಿದೆ.

ನೀರಿಗಾಗಿ ರಾಜ್ಯದಲ್ಲಿ ಹಾಹಾಕಾರ ಶುರುವಾಗಿದೆ. ಬಹುತೇಕ ಎಲ್ಲಾ ಕಡೆಯೂ ನೀರಿನ ಸಮಸ್ಯೆ. ಅಂತರ್ಜಲ ಮಟ್ಟ ಕುಸಿತವಾಗಿದೆ.ಕೃಷಿಗೆ ನೀರಿನ ಸಮಸ್ಯೆ ಎಂದರು ಕೃಷಿಕರು ಹೇಳಿದರೆ, ಹಲವು ಕಡೆ ಕುಡಿಯುವ ನೀರಿಗೇ ಸಮಸ್ಯೆಯಾಗಿದೆ. ಗ್ರಾಮೀಣ ಭಾಗದಲ್ಲೂ ಯಥೇಚ್ಛವಾಗಿದ್ದ ನೀರು ಈಗ ಕಡಿಮೆಯಾಗತೊಡಗಿದೆ. ನಗರದ ಸಮಸ್ಯೆ ಕಠಿಣವಾಗಿದೆ. ನೀರಿಲ್ಲದೆ ದಿನ ಕಳೆಯುವುದೂ ಕಷ್ಟವೇ ಆಗಿದೆ. ಈಗೀಗ ಖರ್ಚುಗಳು ಹೆಚ್ಚಾಗುತ್ತಿದೆ. ನೀರಿನ ವೆಚ್ಚವೇ ನಗರದ ಆಡಳಿತಗಳಿಗೆ ಹೊರೆಯಾಗುತ್ತಿದೆ. ಬೆಂಗಳೂರು ಈಗ ಅದೇ ಸಮಸ್ಯೆ ಅನುಭವಿಸುತ್ತಿದೆ.

ಬೆಂಗಳೂರಿನ ಜಲಮಂಡಳಿಯು 10 ಲಕ್ಷಕ್ಕೂ ಅಧಿಕ ನೀರಿನ ಸಂಪರ್ಕಗಳನ್ನು ಹೊಂದಿದೆ. ಗ್ರಾಹಕರಿಂದ ಬಿಲ್ ರೂಪದಲ್ಲಿ ಸುಮಾರು 131 ಕೋಟಿ ರೂಪಾಯಿ ಪ್ರತಿ ತಿಂಗಳು ಸಂಗ್ರಹ ಮಾಡಲಾಗುತ್ತಿದೆ. ಈ ಪೈಕಿ 68 ಕೋಟಿ ರೂಪಾಯಿ ವಿದ್ಯುತ್ ಬಿಲ್‍ಗೆ ಪಾವತಿಯಾದರೆ 40 ಕೋಟಿಯಷ್ಟು ಮೊತ್ತ ಅಧಿಕಾರಿ ಸಿಬ್ಬಂದಿ ವೇತನಕ್ಕೆ ವ್ಯಯವಾಗುತ್ತಿದೆ. 10 ಕೋಟಿ ರೂಪಾಯಿ ಸಾಲ ಮರುಪಾವತಿಗಾಗಿ ಪ್ರತಿ ತಿಂಗಳು ಮೀಸಲಿಡಲಾಗಿದೆ. 15 ಕೋಟಿ ರೂಪಾಯಿ ಎಸ್ ಟಿಪಿಗಳ ನಿರ್ವಹಣೆಗೆ, 2 ಕೋಟಿ ರೂಪಾಯಿ ಆಡಳಿತ ವೆಚ್ಚ2.5 ಕೋಟಿ ರೂಪಾಯಿ ಅನ್ನು ನೀರಿನ ಸಂಸ್ಕರಣಾ ಘಟಕದ ನಿರ್ವಹಣೆಗೆ ಖರ್ಚು.ಇತರೆ ನಿರ್ವಹಣಾ ವೆಚ್ಚಕ್ಕೆ 7.5 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ.ಹೀಗಾಗಿ ಈಗ ಆದಾಯಕ್ಕಿಂತ ಸುಮಾರು 15 ಕೋಟಿ ರೂಪಾಯಿ ಪ್ರತಿ ತಿಂಗಳು ವೆಚ್ಚ ಹೆಚ್ಚಾಗಿದೆ.

ನೀರು ಅತ್ಯಮೂಲ್ಯ ವಸ್ತುವಾಗಿದೆ. ಬಳಕೆಯಲ್ಲಿ ಮಿತಿ ಇರಲಿ, ಎಲ್ಲರಿಗೂ ನೀರು ಸಿಗುವಂತಾಗಲಿ. ಇದಕ್ಕಾಗಿ ಜಲಸಂರಕ್ಷಣೆಗೆ ಏನೆಲ್ಲಾ ಬೇಕೋ ಅದನ್ನೆಲ್ಲಾ ಜನರೇ ಮಾಡಬೇಕಾದ ಅನಿವಾರ್ಯತೆ ಇದೆ. ಈ ಕೆಲಸ ಕೃಷಿಕರಿಂದ, ನಗರವಾಸಿಗಳಿಂದ ನಡೆಯಲಿದೆ.

Source : ಅಂತರ್ಜಾಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago