Advertisement
ವಿಶೇಷ ವರದಿಗಳು

ಗುತ್ತಿಗಾರು : ಮೆಟ್ಟಿನಡ್ಕದಲ್ಲಿ ಎಲ್ಲಾ ಇದೆ -ಕುಡಿಯುವ ನೀರಿಲ್ಲ..! | ಇಲ್ಲಿ ಎಲ್ಲಾ ಯೋಜನೆಗಳೂ ಹೀಗೇಕೆ ? |

Share

ಕೊಳವೆಬಾವಿ ಇದೆ. ನೀರಿನ ಟ್ಯಾಂಕ್‌ ಇದೆ, ಪೈಪ್‌ ಲೈನ್‌ ಇದೆ. ಕುಡಿಯುವ ನೀರು ಮಾತ್ರಾ ಇಲ್ಲ…! . ಇದು ಗುತ್ತಿಗಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮೆಟ್ಟಿನಡ್ಕದಲ್ಲಿನ ಪರಿಸ್ಥಿತಿ. ಸರಕಾರದ ಯೋಜನೆಗಳೆಲ್ಲಾ ಹೀಗಾದರೆ ಹೇಗೆ ?

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್‌ ಅತ್ಯಂತ ಪ್ರತಿಷ್ಟಿತ ಪಂಚಾಯತ್‌ ಎಂಬ ಹೆಗ್ಗಳಿಕೆ. ಇಲ್ಲಿ ಎಲ್ಲಾ ಪಕ್ಷಗಳಿಂದಲೂ ಪ್ರಮುಖ ನಾಯಕರು ಇದ್ದಾರೆ. ಆದರೆ ಎಲ್ಲಾ ಯೋಜನೆಗಳೂ ಅರ್ಧಕ್ಕೆ ಅರ್ಧವೇ..!. ಮೊನ್ನೆ ಮೊನ್ನೆ ಗುತ್ತಿಗಾರಿನಲ್ಲಿ ಸುದ್ದಿ ಮಾಡಿದ್ದು ಕುಡಿಯುವ ನೀರು. ಗುತ್ತಿಗಾರು ಪೇಟೆಯಲ್ಲಿಯೇ ಕುಡಿಯುವ ನೀರಿಲ್ಲದೆ ಹಲವು ದಿನಗಳಾದರೂ ಯಾವುದೇ ಸ್ಪಂದನ ಇರಲಿಲ್ಲ ಎಂದು ಸಾರ್ವಜನಿಕರು  ಹೇಳಿದ್ದರು.

 

ಇನ್ನೊಂದು ಸುದ್ದಿಯಾದ ಸಂಗತಿ ಎಂದರೆ ಜಿಮ್‌ ಕೇಂದ್ರ. ಗುತ್ತಿಗಾರಿಗೆ ಜಿಮ್‌ ಪರಿಕರಗಳು ಲಭ್ಯವಿದ್ದರೂ ಅದು ಸಾರ್ವಜನಿಕರಿಗೆ ಉಪಯೋಗಕ್ಕೆ ಸಿಗಲಿಲ್ಲ. ಈ ಬಗ್ಗೆಯೂ ಯಾವುದೇ ಸ್ಪಂದನೆ ಇಲ್ಲ.

ಇದೀಗ ಇದೇ ಪಂಚಾಯತ್‌ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮೆಟ್ಟಿನಡ್ಕದಲ್ಲಿ ಅಂತಹದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿ ವಿಶ್ವ ಬ್ಯಾಂಕ್‌ ಯೋಜನೆಯಡೆ ನೀರಿನ ಟ್ಯಾಂಕ್‌ ನಿರ್ಮಾಣವಾಗಿದೆ. ಕೆಲವು ಸಮಯಗಳವರೆಗೆ ಸಾರ್ವಜನಿಕರಿಗೆ ಉಪಯೋಗವಾಗುತ್ತಿತ್ತು. ಈಚೆಗೆ ಸುಮಾರು ಆರೇಳು ವರ್ಷಗಳಿಂದ ಈ ಟ್ಯಾಂಕ್‌ ಗೆ ನೀರು ಪೂರೈಕೆ ಆಗುತ್ತಿರಲಿಲ್ಲ. ಹೀಗಾಗಿ ಮೆಟ್ಟಿನಡ್ಕ ಶಾಲೆ ಹಾಗೂ ಆಸುಪಾಸಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಅಚ್ಚರಿ ಎಂದರೆ ಸುಳ್ಯದ ಶಾಸಕರ ಸಂಬಂಧಿಕರೋರ್ವರಿಗೂ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಅವರು ಈ ಬಗ್ಗೆ ಸಮಾಧಾನದಿಂದಲೇ ನೀರು ಹೊತ್ತು ತರುತ್ತಿದ್ದಾರೆ…!. ಈ ಎಲ್ಲಾ ಸಮಸ್ಯೆ ನಿವಾರಣೆಗೆ ನೂತನ ಕೊಳವೆ ಬಾವಿ ಕೂಡಾ ತೆಗೆಯಲಾಗಿದೆ. ಅದಾದ ಬಳಿಕ ಪಂಪ್‌, ಪೈಪ್‌ ಅಳವಡಿಕೆಗೆ ಕೂಡಾ ಅನುದಾನ ಇದ್ದರೂ ಟ್ಯಾಂಕ್‌ ಗೆ ಇನ್ನೂ ನೀರು ಹಾಯಿಸಲು ಸಾಧ್ಯವಾಗಲಿಲ್ಲ. ಈಚೆಗೆ ಮೆಟ್ಟಿನಡ್ಕದ ಇನ್ನೊಂದು ಪ್ರದೇಶದಲ್ಲಿ  ನೀರಿನ  ಸಮಸ್ಯೆ ಉಂಟಾದಾಗ ಗ್ರಾಪಂ ಸದಸ್ಯೆಯೊಬ್ಬರು ಸ್ವತ: ಹಾರೆ ಹಿಡಿದು ಕೆಲಸ ಮಾಡಿದ್ದರು. ಈಗ ಮೆಟ್ಟಿನಡ್ಕದ ಇನ್ನೊಂದು ಪ್ರದೇಶದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

 

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

19 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago