ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಈ ಅವಧಿಯ ಕೊನೆಯ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗಳಿಗೆ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಮಾದರಿಯಲ್ಲಿ ರಾಜ್ಯದಾದ್ಯಂತ ಎಲ್ಲಾ ಪೌರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದಾಗಿದೆ.
ಯೋಜನೆಗೆ ಪ್ರಧಾನಿ ಮೋದಿ ಅವರ ಮೂಲಕ ಚಾಲನೆ ನೀಡಲು ಕ್ರಮ ಕೈಗೊಳ್ಳಲಾಗಿದೆ. ಹೆಚ್ಚಿನ ಜನ ಸಮುದಾಯ ತಲುಪುವ ಯೋಜನೆಗಳಿಗೆ ಚಾಲನೆ ನೀಡಲು 2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇದೆ. 155 ಪೌರ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯೋಜನೆ ಜಾರಿಗೊಳಿಸುವ ನಿರೀಕ್ಷೆ ಇದ್ದು, ರಾಜ್ಯದ 55 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗುವುದು ಉಚಿತವಾಗಿ ನೀರು ಪೂರೈಕೆ ಬಗ್ಗೆಯೂ ಚಿಂತನೆ ನಡೆಸಲಾಗಿದೆ.
ಮೇಲ್ಮೈ ಜಲ ಮೂಲಗಳಿಂದ ಗುಣಮಟ್ಟದ ಕುಡಿಯುವ ನೀರು ಪೂರೈಕೆ ಮಾಡುವುದು ಯೋಜನೆಯ ಉದ್ದೇಶವಾಗಿದ್ದು, ಜಲಜೀವನ್ ಮಿಷನ್ ಯೋಜನೆ ವಿಸ್ತರಣೆ ರೀತಿಯಲ್ಲಿ ಇದು ಇರಲಿದೆ. ಮಾಸಿಕ 10,000 ಲೀಟರ್ ಮಿತಿಗೆ ಒಳಪಟ್ಟು ಉಚಿತವಾಗಿ ನೀರು ಒದಗಿಸಲು ಚಿಂತನೆ ಕೂಡ ನಡೆದಿದೆ.
ರಾಜ್ಯದಾದ್ಯಂತ ಗರಿಷ್ಠ 55 ಲಕ್ಷ ಮನೆಗಳು ಈ ಯೋಜನೆ ವ್ಯಾಪ್ತಿಗೆ ಬರಬಹುದಾಗಿದ್ದು, ಎಷ್ಟು ವೆಚ್ಚವಾಗಬಹುದು ಎಂಬ ಲೆಕ್ಕಾಚಾರ ನಡೆದಿದೆ. ಅನುದಾನ ಹೊಂದಾಣಿಕೆ ಮಾಡಿಕೊಂಡು ಬಜೆಟ್ ನಲ್ಲಿ ಜಲಜೀವನ ಮಿಷನ್ ಗೆ ಹೊಸ ರೂಪ ನೀಡಿ ರಾಜ್ಯದ ಪಟ್ಟಣ, ನಗರವಾಸಿಗಳ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಈ ಜನಪ್ರಿಯ ಯೋಜನೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…