#KRSDAM | ಕೆಆರ್‌ಎಸ್‌ ಡ್ಯಾಂನಿಂದ ರೈತರ ಬೆಳೆಗಳಿಗೆ ಬಿಡುತ್ತಿದ್ದ ನೀರು ಸ್ಥಗಿತ | ತಮಿಳುನಾಡಿಗೆ ನೀರು ಬಿಡುಗಡೆ |

August 5, 2023
12:41 PM
ಮಂಡ್ಯ ಜಿಲ್ಲೆಯ ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜನಪ್ರತಿನಿಧಿಗಳು ತಿಳಿಸಿದ್ದಾರೆ.
Advertisement

ವರುಣನ ಕೃಪೆಯಿಂದ ರಾಜ್ಯದ ಜೀವ ನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಮಂಡ್ಯ ರೈತರ, ಬೆಂಗಳೂರು ನಾಗರೀಕರ ಅಗತ್ಯವನ್ನು ಪೂರೈಸುವುದಲ್ಲದೆ, ಪಕ್ಕದ ರಾಜ್ಯ ತಮಿಳುನಾಡಿನ ಜೀವನಾಡಿ ಕೂಡ ಹೌದು. ಇದೀಗ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡಲಾಗಿದೆ. 5,308 ಕ್ಯೂಸೆಕ್‌ ನೀರನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

Advertisement

ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜನಪ್ರತಿನಿಧಿಗಳು ತಿಳಿಸಿದ್ದಾರೆ. ಹೀಗಿರುವಾಗ ಕಾವೇರಿ ನೀರಾವರಿ ನಿಗಮ ತಮಿಳುನಾಡಿಗೆ ನೀರು ಹರಿಸಿದೆ. ಮುಂಗಾರಿನ ಹಿನ್ನೆಲೆ ಕೆಲ ದಿನಗಳ ಹಿಂದೆ ಕೊಡಗಿನಲ್ಲಿ ಉತ್ತಮ ಮಳೆಯಾಗಿತ್ತು. ಹೀಗಾಗಿ ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟವೂ ಹೆಚ್ಚಿದೆ. ಈಗ ಮತ್ತೆ ಮಳೆ ಪ್ರಮಾಣ ತಗ್ಗಿದೆ. ಈಗಾಗಲೇ ಕೆಆರ್‌ಎಸ್‌ 113 ಅಡಿ ತುಂಬಿದೆ. ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೂ 11 ಅಡಿಯಷ್ಟೇ ಬಾಕಿ ಇದೆ.

Advertisement
Advertisement

KRS ಡ್ಯಾಂನ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 113.44 ಅಡಿ
ಒಳ ಹರಿವು – 5,270 ಕ್ಯೂಸೆಕ್
ಹೊರ ಹರಿವು – 5,358 ಕ್ಯೂಸೆಕ್
ಗರಿಷ್ಠ ಸಂಗ್ರಹ ಸಾಮರ್ಥ್ಯ – 49.452 ಟಿಎಂಸಿ
ಇಂದು ಸಂಗ್ರಹ ಇರುವ ನೀರು – 35.325 ಟಿಎಂಸಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚೀನಾವನ್ನು ಸೈಡ್‌ಲೈನ್‌ ಮಾಡಿದ ಯುಎಸ್‌ | ಯುಎಸ್‌ನ ವಾಲ್‌ಮಾರ್ಟ್‌ಗೆ ಭಾರತದಿಂದ ಚಿಲ್ಲರೆ ವಸ್ತುಗಳ ರಫ್ತು | ಈ ವರ್ಷ ವಾಲ್‌ಮಾರ್ಟ್‌ ಆಮದು ಮಾಡಿಕೊಂಡ ವಸ್ತು ಎಷ್ಟು..? |
December 1, 2023
2:10 PM
by: The Rural Mirror ಸುದ್ದಿಜಾಲ
ಲೆಮನ್​ ಗ್ರಾಸ್​ ಬೆಳೆಯ ಮೂಲಕ ಬದುಕು ಬದಲಾಯಿಸಿದ ಕುಟುಂಬ | ನಕ್ಸಲ್‌ ಪೀಡಿತ ಪ್ರದೇಶದ ರೈತ ದಂಪತಿಯ ಯಶೋಗಾಥೆ
December 1, 2023
1:25 PM
by: The Rural Mirror ಸುದ್ದಿಜಾಲ
ತುರಿಗಜ್ಜಿ (ಸ್ಕೇಬಿಸ್) ಎಂದರೇನು? | ಹೋಮಿಯೋಪತಿಯಲ್ಲಿದೆ ಪರಿಣಾಮಕಾರಿ ಚಿಕಿತ್ಸೆ |
December 1, 2023
12:55 PM
by: The Rural Mirror ಸುದ್ದಿಜಾಲ
ಪಾಕಿಸ್ತಾನದ ಆರ್ಥಿಕ ಸಮಸ್ಯೆ ಹಲವು ದೇಶಗಳಿಗೆ ಹೊಡೆತ…! | ಹೊರ ದೇಶಗಳಿಂದ ಆಮದಾಗುತ್ತಿದ್ದ ಗೋಧಿಯ ಮೇಲೆ ನಿಷೇಧ ಹೇರಿದ ಪಾಕ್‌ |
December 1, 2023
12:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror