ಸುದ್ದಿಗಳು

#KRSDAM | ಕೆಆರ್‌ಎಸ್‌ ಡ್ಯಾಂನಿಂದ ರೈತರ ಬೆಳೆಗಳಿಗೆ ಬಿಡುತ್ತಿದ್ದ ನೀರು ಸ್ಥಗಿತ | ತಮಿಳುನಾಡಿಗೆ ನೀರು ಬಿಡುಗಡೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವರುಣನ ಕೃಪೆಯಿಂದ ರಾಜ್ಯದ ಜೀವ ನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಮಂಡ್ಯ ರೈತರ, ಬೆಂಗಳೂರು ನಾಗರೀಕರ ಅಗತ್ಯವನ್ನು ಪೂರೈಸುವುದಲ್ಲದೆ, ಪಕ್ಕದ ರಾಜ್ಯ ತಮಿಳುನಾಡಿನ ಜೀವನಾಡಿ ಕೂಡ ಹೌದು. ಇದೀಗ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡಲಾಗಿದೆ. 5,308 ಕ್ಯೂಸೆಕ್‌ ನೀರನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

Advertisement
Advertisement

ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜನಪ್ರತಿನಿಧಿಗಳು ತಿಳಿಸಿದ್ದಾರೆ. ಹೀಗಿರುವಾಗ ಕಾವೇರಿ ನೀರಾವರಿ ನಿಗಮ ತಮಿಳುನಾಡಿಗೆ ನೀರು ಹರಿಸಿದೆ. ಮುಂಗಾರಿನ ಹಿನ್ನೆಲೆ ಕೆಲ ದಿನಗಳ ಹಿಂದೆ ಕೊಡಗಿನಲ್ಲಿ ಉತ್ತಮ ಮಳೆಯಾಗಿತ್ತು. ಹೀಗಾಗಿ ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟವೂ ಹೆಚ್ಚಿದೆ. ಈಗ ಮತ್ತೆ ಮಳೆ ಪ್ರಮಾಣ ತಗ್ಗಿದೆ. ಈಗಾಗಲೇ ಕೆಆರ್‌ಎಸ್‌ 113 ಅಡಿ ತುಂಬಿದೆ. ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೂ 11 ಅಡಿಯಷ್ಟೇ ಬಾಕಿ ಇದೆ.

KRS ಡ್ಯಾಂನ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 113.44 ಅಡಿ
ಒಳ ಹರಿವು – 5,270 ಕ್ಯೂಸೆಕ್
ಹೊರ ಹರಿವು – 5,358 ಕ್ಯೂಸೆಕ್
ಗರಿಷ್ಠ ಸಂಗ್ರಹ ಸಾಮರ್ಥ್ಯ – 49.452 ಟಿಎಂಸಿ
ಇಂದು ಸಂಗ್ರಹ ಇರುವ ನೀರು – 35.325 ಟಿಎಂಸಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

2 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

2 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

2 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

2 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…

2 hours ago