ವಿಶ್ವಬ್ಯಾಂಕ್ ನೆರವಿನ ರಿವಾರ್ಡ್ ಯೋಜನೆಯಡಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ಸಂಪೂರ್ಣ ಜಲಾನಯನ ಉಪಚಾರ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಯೋಜನೆಯಡಿ ಕುರಿ-ಮೇಕೆ, ದನ-ಕರು, ಎಮ್ಮೆಗಳಿಗೆ ಕುಡಿಯಲು ನೀರು. ಏಳು ಹಳ್ಳಿಗಳ ಸೂಕ್ತ ಪ್ರದೇಶದಲ್ಲಿ ತಲಾ ಒಂದು ನೀರಿನ ತೊಟ್ಟಿ ಅಥವಾ ಕೃಷಿ ಹೊಂಡ ನಿರ್ಮಿಸಲಾಗಿದೆ.…..ಮುಂದೆ ಓದಿ….
ಈ ಯೋಜನೆಯ ಬಗ್ಗೆ ಗ್ರಾಮೀಣ ಭಾಗದಲ್ಲಿ ಈಗಾಗಲೇ ಉತ್ತಮವಾದ ಅಭಿಪ್ರಾಯ ವ್ಯಕ್ತವಾಗಿದೆ. ಮೊದಲ ಹಂತದಲ್ಲಿ10 ಹಾಗೂ ಎರಡನೇ ಹಂತದಲ್ಲಿ 10 ಜಿಲ್ಲೆಗಳಲ್ಲಿ ಈ ಯೋಜನೆ ಅನುಷ್ಠಾನವಾಗುತ್ತಿದೆ. ನೀರಿನ ಲಭ್ಯತೆ ಹಾಗೂ ಮಣ್ಣಿನ ಆಧಾರದ ಮೇಲೆ ಈ ಪ್ರದೇಶ ಆಯ್ಕೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದ್ದು, ನಾಲಾ ಬದು, ಸಣ್ಣ ಜಿನುಗು ಕೆರೆ ಹಾಗೂ ಕೃಷಿ ಹೊಂಡಗಳ ನಿರ್ಮಾಣ ಮಾಡಲಾಗುತ್ತಿದೆ.
ಗ್ರಾಮಗಳಲ್ಲಿ ತೊಟ್ಟಿ ನಿರ್ಮಾಣದಿಂದ ಕುರಿ, ಮೇಕೆ, ನೀರು ಸೇವಿಸಲು ಅನುಕೂಲವಾಗಿದೆ ಎಂದು ಗ್ರಾಮಸ್ಥ ತಿಪ್ಪೇರುದ್ರ ಹೇಳುತ್ತಾರೆ. ತಮ್ಮ14 ಎಕರೆ ಜಮೀನಿನಲ್ಲಿ ರಿವಾರ್ಡ್ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ತೆಂಗು,ಮಾವು, ಸೀಬೆ ಗಿಡಗಳನ್ನು ನೆಡಲಾಗಿದ್ದು, ಬಹಳ ಸಹಾಯವಾಗಿದೆ ಎನ್ನುತ್ತಾರೆ ಕೃಷಿಕ ತಿಪ್ಪೇಸ್ವಾಮಿ ರೆಡ್ಡಿ.
Source : DD
The Department of Agriculture and Jayanayana Development is currently carrying out a comprehensive water tank program in seven villages of Chitradurga district as part of the World Bank aided reward scheme. The program includes providing drinking water for sheep, goats, cattle, calves, and buffaloes. Additionally, one water tank has been constructed in each appropriate location within the seven villages.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…