ಕೊಳವೆಬಾವಿಯಿಂದ ಜಲಧಾರೆ | ಎಡಮಂಗಲದಲ್ಲಿ ಕೃಷಿಕನಿಗೆ ಒಲಿದ ಜಲದೇವತೆ |

April 5, 2021
7:27 PM

ಅನೇಕ ಸಮಯಗಳಿಂದ ಕೃಷಿಗೆ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಕೃಷಿಕನಿಗೆ ಜಲ ದೇವತೆ ಒಲಿದಿದ್ದಾಳೆ. ಕೃಷಿಕನ ಸಮಸ್ಯೆ ನೀಗಿಸಿ ಸಮೃದ್ಧ ಜಲರಾಶಿಯನ್ನೇ ಒದಗಿಸಿದ ಅಪರೂಪದ ಘಟನೆ ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದಲ್ಲಿ  ನಡೆದಿದೆ. ಇದೀಗ ಎಲ್ಲೆಡೆಯೂ ಈ ಬಗ್ಗೆ ಅಚ್ಚರಿ ಹಾಗೂ ಸಂತಸದ ವಾತಾವರಣ ಕಂಡುಬಂದಿದೆ.

ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದ ಅಂಜಿನಡ್ಕದ ಕೃಷಿಕ ಅಶೋಕ್‌ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ಕೊಳವೆಬಾವಿ ತೆಗೆಸಲಾಗಿತ್ತು. 264 ಅಡಿ ಕೊರೆದಾಗ ಯಥೇಚ್ಚ ನೀರು ಲಭ್ಯವಾಗಿದೆ. ಇದೀಗ ಕೊಳವೆಬಾವಿಯಿಂದ ನೀರು ಧಾರೆಯಾಗಿ ಬರುತ್ತಿದೆ. ಎಪ್ರಿಲ್‌ ವೇಳೆಗೆ ಹರಿದು ಬಂದ ನೀರಿಗೆ ಕೃಷಿಕ ಅಶೋಕ್‌ ಸಂತಸ ಪಟ್ಟರೆ ಕೃಷಿಕ ವಲಯವು ಅಶೋಕ್‌ ಅವರ ಸಂತಸದಲ್ಲಿ ಭಾಗಿಯಾಗಿದೆ. ಕೃಷಿಕನಿಗೆ ಲಭ್ಯವಾದ ನೀರಿನಿಂದ ಸಮೃದ್ಧ ಕೃಷಿಯಾಗಲಿ ಎಂದು ಹಾರೈಸಿದ್ದಾರೆ.

 

ಅಶೋಕ್‌ ಅವರ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿಗೆ ನೀರಿನ ಸಮಸ್ಯೆ ಇತ್ತು. ಸುತ್ತಲೂ ಗುಡ್ಡ ಪ್ರದೇಶವಾಗಿದ್ದರೂ ನೀರಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಕೊಳವೆಬಾವಿ ತೆಗೆಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror