Advertisement
Exclusive - Mirror Hunt

ಕೊಳವೆಬಾವಿಯಿಂದ ಜಲಧಾರೆ | ಎಡಮಂಗಲದಲ್ಲಿ ಕೃಷಿಕನಿಗೆ ಒಲಿದ ಜಲದೇವತೆ |

Share

ಅನೇಕ ಸಮಯಗಳಿಂದ ಕೃಷಿಗೆ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಕೃಷಿಕನಿಗೆ ಜಲ ದೇವತೆ ಒಲಿದಿದ್ದಾಳೆ. ಕೃಷಿಕನ ಸಮಸ್ಯೆ ನೀಗಿಸಿ ಸಮೃದ್ಧ ಜಲರಾಶಿಯನ್ನೇ ಒದಗಿಸಿದ ಅಪರೂಪದ ಘಟನೆ ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದಲ್ಲಿ  ನಡೆದಿದೆ. ಇದೀಗ ಎಲ್ಲೆಡೆಯೂ ಈ ಬಗ್ಗೆ ಅಚ್ಚರಿ ಹಾಗೂ ಸಂತಸದ ವಾತಾವರಣ ಕಂಡುಬಂದಿದೆ.

ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದ ಅಂಜಿನಡ್ಕದ ಕೃಷಿಕ ಅಶೋಕ್‌ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ಕೊಳವೆಬಾವಿ ತೆಗೆಸಲಾಗಿತ್ತು. 264 ಅಡಿ ಕೊರೆದಾಗ ಯಥೇಚ್ಚ ನೀರು ಲಭ್ಯವಾಗಿದೆ. ಇದೀಗ ಕೊಳವೆಬಾವಿಯಿಂದ ನೀರು ಧಾರೆಯಾಗಿ ಬರುತ್ತಿದೆ. ಎಪ್ರಿಲ್‌ ವೇಳೆಗೆ ಹರಿದು ಬಂದ ನೀರಿಗೆ ಕೃಷಿಕ ಅಶೋಕ್‌ ಸಂತಸ ಪಟ್ಟರೆ ಕೃಷಿಕ ವಲಯವು ಅಶೋಕ್‌ ಅವರ ಸಂತಸದಲ್ಲಿ ಭಾಗಿಯಾಗಿದೆ. ಕೃಷಿಕನಿಗೆ ಲಭ್ಯವಾದ ನೀರಿನಿಂದ ಸಮೃದ್ಧ ಕೃಷಿಯಾಗಲಿ ಎಂದು ಹಾರೈಸಿದ್ದಾರೆ.

 

ಅಶೋಕ್‌ ಅವರ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿಗೆ ನೀರಿನ ಸಮಸ್ಯೆ ಇತ್ತು. ಸುತ್ತಲೂ ಗುಡ್ಡ ಪ್ರದೇಶವಾಗಿದ್ದರೂ ನೀರಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಕೊಳವೆಬಾವಿ ತೆಗೆಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

23 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

23 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago