ಅನೇಕ ಸಮಯಗಳಿಂದ ಕೃಷಿಗೆ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಕೃಷಿಕನಿಗೆ ಜಲ ದೇವತೆ ಒಲಿದಿದ್ದಾಳೆ. ಕೃಷಿಕನ ಸಮಸ್ಯೆ ನೀಗಿಸಿ ಸಮೃದ್ಧ ಜಲರಾಶಿಯನ್ನೇ ಒದಗಿಸಿದ ಅಪರೂಪದ ಘಟನೆ ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದಲ್ಲಿ ನಡೆದಿದೆ. ಇದೀಗ ಎಲ್ಲೆಡೆಯೂ ಈ ಬಗ್ಗೆ ಅಚ್ಚರಿ ಹಾಗೂ ಸಂತಸದ ವಾತಾವರಣ ಕಂಡುಬಂದಿದೆ.
ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದ ಅಂಜಿನಡ್ಕದ ಕೃಷಿಕ ಅಶೋಕ್ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ಕೊಳವೆಬಾವಿ ತೆಗೆಸಲಾಗಿತ್ತು. 264 ಅಡಿ ಕೊರೆದಾಗ ಯಥೇಚ್ಚ ನೀರು ಲಭ್ಯವಾಗಿದೆ. ಇದೀಗ ಕೊಳವೆಬಾವಿಯಿಂದ ನೀರು ಧಾರೆಯಾಗಿ ಬರುತ್ತಿದೆ. ಎಪ್ರಿಲ್ ವೇಳೆಗೆ ಹರಿದು ಬಂದ ನೀರಿಗೆ ಕೃಷಿಕ ಅಶೋಕ್ ಸಂತಸ ಪಟ್ಟರೆ ಕೃಷಿಕ ವಲಯವು ಅಶೋಕ್ ಅವರ ಸಂತಸದಲ್ಲಿ ಭಾಗಿಯಾಗಿದೆ. ಕೃಷಿಕನಿಗೆ ಲಭ್ಯವಾದ ನೀರಿನಿಂದ ಸಮೃದ್ಧ ಕೃಷಿಯಾಗಲಿ ಎಂದು ಹಾರೈಸಿದ್ದಾರೆ.
ಅಶೋಕ್ ಅವರ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿಗೆ ನೀರಿನ ಸಮಸ್ಯೆ ಇತ್ತು. ಸುತ್ತಲೂ ಗುಡ್ಡ ಪ್ರದೇಶವಾಗಿದ್ದರೂ ನೀರಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಕೊಳವೆಬಾವಿ ತೆಗೆಸಿದ್ದರು.
ಆಷಾಢ ಮಾಸದಲ್ಲಿ ಶಕ್ತಿದೇವತೆ ಪೂಜೆಯ ಮಹತ್ವ ಹಾಗೂ ಏಕೆ ಅಗತ್ಯ ಇದೆ ಎನ್ನುವುದರ…
ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಭಕ್ತರಿಂದ ರಚನಾತ್ಮಕ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲು ಭಕ್ತರಿಂದ ಪ್ರತಿಕ್ರಿಯೆ…
ರೈತರಿಗೆ ಇಲಾಖೆಯ ವತಿಯಿಂದ ಕೃಷಿಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ದಕ್ಷಿಣ ಕನ್ನಡ…
ದ ಕ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
ದಕ್ಷಿಣ ಕನ್ನಡದ ಚೆಸ್ ಆಟಗಾರ ರವೀಶ್ ಕೋಟೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ…