ಅನೇಕ ಸಮಯಗಳಿಂದ ಕೃಷಿಗೆ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ಕೃಷಿಕನಿಗೆ ಜಲ ದೇವತೆ ಒಲಿದಿದ್ದಾಳೆ. ಕೃಷಿಕನ ಸಮಸ್ಯೆ ನೀಗಿಸಿ ಸಮೃದ್ಧ ಜಲರಾಶಿಯನ್ನೇ ಒದಗಿಸಿದ ಅಪರೂಪದ ಘಟನೆ ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದಲ್ಲಿ ನಡೆದಿದೆ. ಇದೀಗ ಎಲ್ಲೆಡೆಯೂ ಈ ಬಗ್ಗೆ ಅಚ್ಚರಿ ಹಾಗೂ ಸಂತಸದ ವಾತಾವರಣ ಕಂಡುಬಂದಿದೆ.
ಕಡಬ ತಾಲೂಕಿನ ಎಡಮಂಗಲ ಬಳಿಯ ಹೇಮಳದ ಅಂಜಿನಡ್ಕದ ಕೃಷಿಕ ಅಶೋಕ್ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಭಾನುವಾರ ಕೊಳವೆಬಾವಿ ತೆಗೆಸಲಾಗಿತ್ತು. 264 ಅಡಿ ಕೊರೆದಾಗ ಯಥೇಚ್ಚ ನೀರು ಲಭ್ಯವಾಗಿದೆ. ಇದೀಗ ಕೊಳವೆಬಾವಿಯಿಂದ ನೀರು ಧಾರೆಯಾಗಿ ಬರುತ್ತಿದೆ. ಎಪ್ರಿಲ್ ವೇಳೆಗೆ ಹರಿದು ಬಂದ ನೀರಿಗೆ ಕೃಷಿಕ ಅಶೋಕ್ ಸಂತಸ ಪಟ್ಟರೆ ಕೃಷಿಕ ವಲಯವು ಅಶೋಕ್ ಅವರ ಸಂತಸದಲ್ಲಿ ಭಾಗಿಯಾಗಿದೆ. ಕೃಷಿಕನಿಗೆ ಲಭ್ಯವಾದ ನೀರಿನಿಂದ ಸಮೃದ್ಧ ಕೃಷಿಯಾಗಲಿ ಎಂದು ಹಾರೈಸಿದ್ದಾರೆ.
ಅಶೋಕ್ ಅವರ ಪ್ರದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಕೃಷಿಗೆ ನೀರಿನ ಸಮಸ್ಯೆ ಇತ್ತು. ಸುತ್ತಲೂ ಗುಡ್ಡ ಪ್ರದೇಶವಾಗಿದ್ದರೂ ನೀರಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ಕೊಳವೆಬಾವಿ ತೆಗೆಸಿದ್ದರು.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…