ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಲಾನಯನ ಅಭಿವೃದ್ಧಿ ಘಟಕದ ಸಹಯೋಗದಲ್ಲಿ ಸುಸ್ಥಿರ ನೀರು ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸುವ ‘ಜಲಾನಯನ ಯಾತ್ರೆ’ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕುರುಡು ಮಲೆಯಲ್ಲಿ ಆರಂಭವಾಯಿತು.
ಜಲಾನಯನ ಯಾತ್ರೆಗಳ ವಾಹನಗಳಿಗೆ ಅಭಿವೃದ್ಧಿ ಇಲಾಖೆ ಆಯುಕ್ತ ಮಹೇಶ್ ಬಿರೂರ್ ಚಾಲನೆ ನೀಡಿದರು.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸಲಿದ್ದು, ನೀರು ನಿರ್ವಹಣೆ ಬಗ್ಗೆ ಜಾಗೃತಿ ಮೂಡಿಸಲಿದೆ. ಸಮಾರಂಭದಲ್ಲಿ ಶಾಸಕ ಕೊತ್ತೂರು ಮಂಜನಾಥ್ ಮಾತನಾಡಿ, ಸಾಂಪ್ರದಾಯಿಕ ಜಲಮೂಲಗಳು ಒತ್ತುವರಿ ಆಗಿದ್ದು, ಜಲ ಮೂಲಗಳ ಪುನಶ್ಚೇತನ ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ವಿಧಾನಪರಿಷತ್ ಸದಸ್ಯ ಅನಿಲ್ ಕುಮಾರ್, ಕೆರೆ, ಮಳೆ ನೀರನ್ನು ಸಂರಕ್ಷಿಸಬೇಕು. ಮಳೆ ನೀರಿನಲ್ಲಿ ಮಣ್ಣು ಕೊಚ್ಚಿಕೊಂಡು ಹೋಗದಂತೆ ತಡೆಗಟ್ಟಬೇಕಾಗಿದೆ. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಎಂದು ಹೇಳಿದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…