ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್” ಭಾರತೀಯ ಹವಾಮಾನ ಇಲಾಖೆ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆ 42ಕಿ.ಮೀ ನಷ್ಟು ಉದ್ದದ ಕರಾವಳಿ ತೀರ ಹೊಂದಿದ್ದು, ಇತ್ತೀಚಿಗೆ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ “ಬಿಪರ್ ಜಾಯ್’ ಚಂಡಮಾರುತವು ಅಪ್ಪಳಿಸುವ ಸಾಧ್ಯತೆಗಳು ಇರುತ್ತದೆ. ಈ ಚಂಡಮಾರುತದ ತೀವ್ರತೆಯ ಪರಿಣಾಮದಿಂದ ಸಮುದ್ರದ ಅಲೆಗಳ ಎತ್ತರ 3 ರಿಂದ 4ಮೀ. ನಷ್ಟು ಇರಲಿದ್ದು, ಕರಾವಳಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಮುಂದಿನ 5 ದಿನಗಳವರೆಗೆ ಅಂದರೆ, ಜೂ.19ರ ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಯಾವುದೇ ಕಾರಣಕ್ಕೂ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೆವೆಗೆ 24/7 ಕಂಟ್ರೋಲ್ ರೂಂ. ಟೋಲ್ ಫ್ರೀ ಸಂಖ್ಯೆ:1077/0824-2442590 ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…