ಕರ್ನಾಟಕದ ಕರಾವಳಿ ಭಾಗದಲ್ಲಿ “ಹೈ ವೇವ್ ಅಲರ್ಟ್” ಭಾರತೀಯ ಹವಾಮಾನ ಇಲಾಖೆ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆ 42ಕಿ.ಮೀ ನಷ್ಟು ಉದ್ದದ ಕರಾವಳಿ ತೀರ ಹೊಂದಿದ್ದು, ಇತ್ತೀಚಿಗೆ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಕರಾವಳಿಗೆ “ಬಿಪರ್ ಜಾಯ್’ ಚಂಡಮಾರುತವು ಅಪ್ಪಳಿಸುವ ಸಾಧ್ಯತೆಗಳು ಇರುತ್ತದೆ. ಈ ಚಂಡಮಾರುತದ ತೀವ್ರತೆಯ ಪರಿಣಾಮದಿಂದ ಸಮುದ್ರದ ಅಲೆಗಳ ಎತ್ತರ 3 ರಿಂದ 4ಮೀ. ನಷ್ಟು ಇರಲಿದ್ದು, ಕರಾವಳಿಯಲ್ಲಿ ಉಂಟಾಗಿರುವ ಪ್ರಕ್ಷುಬ್ಧ ವಾತಾವರಣದಿಂದಾಗಿ ಮುಂದಿನ 5 ದಿನಗಳವರೆಗೆ ಅಂದರೆ, ಜೂ.19ರ ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಯಾವುದೇ ಕಾರಣಕ್ಕೂ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಮುದ್ರದ ಹತ್ತಿರ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೆವೆಗೆ 24/7 ಕಂಟ್ರೋಲ್ ರೂಂ. ಟೋಲ್ ಫ್ರೀ ಸಂಖ್ಯೆ:1077/0824-2442590 ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…