ವಯನಾಡ್​ನಲ್ಲಿ ಭೀಕರ ಭೂಕುಸಿತ | ದುರ್ಘಟನೆಗೆ ಬಲಿಯಾದವರ ಸಂಖ್ಯೆ ಏರುತ್ತಿದೆ | 84 ಮೃತದೇಹ ಪತ್ತೆ‌ | ಸಿಎಂ ಪಿಣರಾಯಿ ಜೊತೆ ಮೋದಿ, ರಾಹುಲ್ ಮಾತುಕತೆ | ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ |

July 30, 2024
12:31 PM

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ ಏರಿಕೆಯಾಗುತ್ತಿದೆ.ಈಗಾಗಲೇ 84 ಮೃತದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಸುಮಾರು 400 ಕುಟುಂಬಗಳು ತೊಂದರೆಗೊಳಗಾಗಿವೆ. 65-70 ಮಂದಿ ಗಾಯಾಳುಗಳನ್ನು ಈಗಾಗಲೇ ವಿವಿಧ ಆಸ್ಪತ್ರಗಳಿಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುತ್ತಿವೆ.

ಕೇರಳದ ವಯನಾಡ್​ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಭೂಕುಸಿತದಿಂದ ಸಂಭವಿಸಿದ ಸಾವು ನೋವಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಸಂತಾಪ ಸೂಚಿಸಿದ್ದಾರೆ. ಪ್ರಾಕೃತಿಕ ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ಭರವಸೆ ನೀಡಿದ್ದಾರೆ. ‘ವಯನಾಡ್​ನ ಕೆಲವು ಭಾಗಗಳಲ್ಲಿ ಉಂಟಾದ ಭೂಕುಸಿತ ಆಘಾತ ಉಂಟುಮಾಡಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪಗಳನ್ನು ಸೂಚಿಸುತ್ತಾ, ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ’ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ‘ಎಕ್ಸ್​’ನಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.
ಜನರ ಸ್ಥಳಾಂತರಕ್ಕೆ ಹೆಲಿಕಾಪ್ಟರ್‌ ನಿಯೋಜನೆ: ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, ತೊಂಡರ್ನಾಡ್ ಗ್ರಾಮದಲ್ಲಿ ನೇಪಾಳ ಮೂಲದ ಕುಟುಂಬದ ಒಂದು ವರ್ಷದ ಮಗು ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ, ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಕಾರ್ಯಾಲಯ ಘೋಷಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ”ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಶೀಘ್ರದಲ್ಲೇ ಸೂಲೂರಿನಿಂದ ವಯನಾಡ್‌ಗೆ ತೆರಳಲಿವೆ” ಎಂದು ಫೇಸ್‌ಬುಕ್ ಪೋಸ್ಟ್​ ಮಾಡಿದ್ದಾರೆ. ಶಾಸಕ ಟಿ.ಸಿದ್ದಿಕ್ ಪ್ರತಿಕ್ರಿಯಿಸಿ, ”ಮುಂಡಕ್ಕೈ ಪ್ರದೇಶದಿಂದ ಸಂತ್ರಸ್ತ ಜನರನ್ನು ಏರ್​ಲಿಫ್ಟ್​ ಮಾಡಲು ಅಧಿಕಾರಿಗಳು ಯೋಜನೆ ರೂಪಿಸುತ್ತಿದ್ದಾರೆ. ಭೂಕುಸಿತದಲ್ಲಿ ಕಾಣೆಯಾದ ಮತ್ತು ಸತ್ತವರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇಲ್ಲ. ಹಲವು ಪ್ರದೇಶಗಳು ಸಂಪರ್ಕ ಕಡಿತಗೊಂಡಿವೆ. ಎನ್‌ಡಿಆರ್‌ಎಫ್ ಸಿಬ್ಬಂದಿ ಘಟನಾ ಸ್ಥಳಗಳಿಗೆ ತಲುಪಲು ಪ್ರಯತ್ನಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ನಡುವೆ ಹಲವಾರು ಕುಟುಂಬಗಳನ್ನು ಸುರಕ್ಷಿತವಾಗಿರುವ ಅವರ ಸಂಬಂಧಿಕರ ಮನೆಗಳು ಹಾಗೂ ವಿವಿಧ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯ ಹೋಂಸ್ಟೇಗಳನ್ನು ಹೊಂದಿರುವ ಅಟ್ಟಮಾಲಾವು ಪ್ರವೇಶದಲ್ಲಿ ಅಪಾರ ಹಾನಿಯಾಗಿದೆ. ಪ್ರವಾಸಿಗರೂ ಸಿಕ್ಕಿಬಿದ್ದಿರುವ ವರದಿಗಳಾಗಿವೆ.

Source: ANI

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror