Advertisement
MIRROR FOCUS

ವಯನಾಡ್​ನಲ್ಲಿ ಭೀಕರ ಭೂಕುಸಿತ | ದುರ್ಘಟನೆಗೆ ಬಲಿಯಾದವರ ಸಂಖ್ಯೆ ಏರುತ್ತಿದೆ | 84 ಮೃತದೇಹ ಪತ್ತೆ‌ | ಸಿಎಂ ಪಿಣರಾಯಿ ಜೊತೆ ಮೋದಿ, ರಾಹುಲ್ ಮಾತುಕತೆ | ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ |

Share

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ ಏರಿಕೆಯಾಗುತ್ತಿದೆ.ಈಗಾಗಲೇ 84 ಮೃತದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಸುಮಾರು 400 ಕುಟುಂಬಗಳು ತೊಂದರೆಗೊಳಗಾಗಿವೆ. 65-70 ಮಂದಿ ಗಾಯಾಳುಗಳನ್ನು ಈಗಾಗಲೇ ವಿವಿಧ ಆಸ್ಪತ್ರಗಳಿಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುತ್ತಿವೆ.

Advertisement
Advertisement
ಕೇರಳದ ವಯನಾಡ್​ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಭೂಕುಸಿತದಿಂದ ಸಂಭವಿಸಿದ ಸಾವು ನೋವಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಸಂತಾಪ ಸೂಚಿಸಿದ್ದಾರೆ. ಪ್ರಾಕೃತಿಕ ಬಿಕ್ಕಟ್ಟನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪ್ರಧಾನಿ ಭರವಸೆ ನೀಡಿದ್ದಾರೆ. ‘ವಯನಾಡ್​ನ ಕೆಲವು ಭಾಗಗಳಲ್ಲಿ ಉಂಟಾದ ಭೂಕುಸಿತ ಆಘಾತ ಉಂಟುಮಾಡಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪಗಳನ್ನು ಸೂಚಿಸುತ್ತಾ, ಗಾಯಾಳುಗಳ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಹಾಯ ಮಾಡಲು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ’ ಎಂದು ಪ್ರಧಾನಿ ಮೋದಿ ಸಾಮಾಜಿಕ ಜಾಲತಾಣ ‘ಎಕ್ಸ್​’ನಲ್ಲಿ ಪೋಸ್ಟ್​ ಮಾಡಿದ್ದಾರೆ. ‘ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೊಂದಿಗೆ ಮಾತನಾಡಿದ್ದೇನೆ. ಅಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಭರವಸೆ ನೀಡಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.
ಜನರ ಸ್ಥಳಾಂತರಕ್ಕೆ ಹೆಲಿಕಾಪ್ಟರ್‌ ನಿಯೋಜನೆ: ಚೂರಲ್ಮಲಾ ಪಟ್ಟಣದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, ತೊಂಡರ್ನಾಡ್ ಗ್ರಾಮದಲ್ಲಿ ನೇಪಾಳ ಮೂಲದ ಕುಟುಂಬದ ಒಂದು ವರ್ಷದ ಮಗು ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ, ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಕಾರ್ಯಾಲಯ ಘೋಷಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ”ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳು ಶೀಘ್ರದಲ್ಲೇ ಸೂಲೂರಿನಿಂದ ವಯನಾಡ್‌ಗೆ ತೆರಳಲಿವೆ” ಎಂದು ಫೇಸ್‌ಬುಕ್ ಪೋಸ್ಟ್​ ಮಾಡಿದ್ದಾರೆ. ಶಾಸಕ ಟಿ.ಸಿದ್ದಿಕ್ ಪ್ರತಿಕ್ರಿಯಿಸಿ, ”ಮುಂಡಕ್ಕೈ ಪ್ರದೇಶದಿಂದ ಸಂತ್ರಸ್ತ ಜನರನ್ನು ಏರ್​ಲಿಫ್ಟ್​ ಮಾಡಲು ಅಧಿಕಾರಿಗಳು ಯೋಜನೆ ರೂಪಿಸುತ್ತಿದ್ದಾರೆ. ಭೂಕುಸಿತದಲ್ಲಿ ಕಾಣೆಯಾದ ಮತ್ತು ಸತ್ತವರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇಲ್ಲ. ಹಲವು ಪ್ರದೇಶಗಳು ಸಂಪರ್ಕ ಕಡಿತಗೊಂಡಿವೆ. ಎನ್‌ಡಿಆರ್‌ಎಫ್ ಸಿಬ್ಬಂದಿ ಘಟನಾ ಸ್ಥಳಗಳಿಗೆ ತಲುಪಲು ಪ್ರಯತ್ನಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

Advertisement

ಈ ನಡುವೆ ಹಲವಾರು ಕುಟುಂಬಗಳನ್ನು ಸುರಕ್ಷಿತವಾಗಿರುವ ಅವರ ಸಂಬಂಧಿಕರ ಮನೆಗಳು ಹಾಗೂ ವಿವಿಧ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯ ಹೋಂಸ್ಟೇಗಳನ್ನು ಹೊಂದಿರುವ ಅಟ್ಟಮಾಲಾವು ಪ್ರವೇಶದಲ್ಲಿ ಅಪಾರ ಹಾನಿಯಾಗಿದೆ. ಪ್ರವಾಸಿಗರೂ ಸಿಕ್ಕಿಬಿದ್ದಿರುವ ವರದಿಗಳಾಗಿವೆ.

Source: ANI

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

18 mins ago

ಕಿಸಾನ್‌ ಸಮ್ಮಾನ್‌ ನಿಧಿಯ ಮೂಲಕ ರೈತರಿಗೆ 21,000 ಕೋಟಿ ರೂಪಾಯಿ |

ಕಿಸಾನ್‌ ಸಮ್ಮಾನ್‌ ನಿಧಿಯಿಂದ 9 ಕೋಟಿ 50 ಲಕ್ಷ  ರೈತರಿಗೆ  21 ಸಾವಿರ…

2 hours ago

ತುಮಕೂರು ಜಿಲ್ಲೆಯಲ್ಲಿ ದಾಖಲೆಯ ಹಾಲು ಉತ್ಪಾದನೆ

ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…

2 hours ago

ಕೋಲಾರದಲ್ಲಿ ಸಾವಿರಕ್ಕೂ ಅಧಿಕ ನಕಲಿ ವೈದ್ಯರ ವಿರುದ್ಧ ಪ್ರಕರಣ |

ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ  ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…

2 hours ago

ಹೊರನಾಡು ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…

3 hours ago