ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕರ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ ಏರಿಕೆಯಾಗುತ್ತಿದೆ.ಈಗಾಗಲೇ 84 ಮೃತದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಸುಮಾರು 400 ಕುಟುಂಬಗಳು ತೊಂದರೆಗೊಳಗಾಗಿವೆ. 65-70 ಮಂದಿ ಗಾಯಾಳುಗಳನ್ನು ಈಗಾಗಲೇ ವಿವಿಧ ಆಸ್ಪತ್ರಗಳಿಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ತಂಡಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಡೆಸುತ್ತಿವೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ”ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ವಾಯುಪಡೆಯ ಎರಡು ಹೆಲಿಕಾಪ್ಟರ್ಗಳು ಶೀಘ್ರದಲ್ಲೇ ಸೂಲೂರಿನಿಂದ ವಯನಾಡ್ಗೆ ತೆರಳಲಿವೆ” ಎಂದು ಫೇಸ್ಬುಕ್ ಪೋಸ್ಟ್ ಮಾಡಿದ್ದಾರೆ. ಶಾಸಕ ಟಿ.ಸಿದ್ದಿಕ್ ಪ್ರತಿಕ್ರಿಯಿಸಿ, ”ಮುಂಡಕ್ಕೈ ಪ್ರದೇಶದಿಂದ ಸಂತ್ರಸ್ತ ಜನರನ್ನು ಏರ್ಲಿಫ್ಟ್ ಮಾಡಲು ಅಧಿಕಾರಿಗಳು ಯೋಜನೆ ರೂಪಿಸುತ್ತಿದ್ದಾರೆ. ಭೂಕುಸಿತದಲ್ಲಿ ಕಾಣೆಯಾದ ಮತ್ತು ಸತ್ತವರ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇಲ್ಲ. ಹಲವು ಪ್ರದೇಶಗಳು ಸಂಪರ್ಕ ಕಡಿತಗೊಂಡಿವೆ. ಎನ್ಡಿಆರ್ಎಫ್ ಸಿಬ್ಬಂದಿ ಘಟನಾ ಸ್ಥಳಗಳಿಗೆ ತಲುಪಲು ಪ್ರಯತ್ನಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
ಈ ನಡುವೆ ಹಲವಾರು ಕುಟುಂಬಗಳನ್ನು ಸುರಕ್ಷಿತವಾಗಿರುವ ಅವರ ಸಂಬಂಧಿಕರ ಮನೆಗಳು ಹಾಗೂ ವಿವಿಧ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯ ಹೋಂಸ್ಟೇಗಳನ್ನು ಹೊಂದಿರುವ ಅಟ್ಟಮಾಲಾವು ಪ್ರವೇಶದಲ್ಲಿ ಅಪಾರ ಹಾನಿಯಾಗಿದೆ. ಪ್ರವಾಸಿಗರೂ ಸಿಕ್ಕಿಬಿದ್ದಿರುವ ವರದಿಗಳಾಗಿವೆ.
Source: ANI
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…