ವಯನಾಡಿನಲ್ಲಿ ಮತ್ತೊಂದು ಭೀತಿ | ಭೂಕುಸಿತದ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವ

August 10, 2024
11:20 AM

ಕೇರಳದ(Kerala) ವಯನಾಡು(Wayanad) ಈಗಾಗಲೇ ರಣ ಭೀಕರ ಭು ಕುಸಿತ ದುರಂತಕ್ಕೆ ಹೈರಾಣಾಗಿದೆ. ಮತ್ತೆ ಮರಳಿ ಅಲ್ಲಿ ಜೀವನ ಕಟ್ಟಿಕೊಳ್ಳುವುದು ಅಸಾಧ್ಯ ಅನ್ನುವ ಮಟ್ಟಕ್ಕೆ ದುರಂತ ಸಂಭವಿಸೆದೆ. ಮತ್ತೆ ಅಲ್ಲಿ ಬದುಕು ಕಟ್ಟಿಕೊಳ್ಳಬಹುದೇನೋ ಅನ್ನುವ ಅಸೆಯಲ್ಲಿದ್ದ ವಯನಾಡಿನ ಜನತೆಗೆ ಇದೀಗ ಮತ್ತೊಂದು ಭೀತಿ ಎದುರಾಗಿದೆ.  ಇಂದು ಬೆಳಗ್ಗೆ 10:15 ಕ್ಕೆ ವಯನಾಡಿನಲ್ಲಿ ಭೂಮಿ ಕಂಪಿಸಿದ(Earth Quqke) ಅನುಭವವಾಗಿದೆ.

ಇತ್ತೀಚೆಗೆ ಭೂಕುಸಿತ ಸಂಭವಿಸಿದ ಚೂರಲ್ಮಲಾ – ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ 20 ಕಿಲೋಮೀಟರ್ ದೂರದಲ್ಲಿರುವ ಅಂಬಲವಾಯಲ್-ಎಡಕಲ್ ಪ್ರದೇಶಗಳಲ್ಲಿ ಬೆಳಗ್ಗೆ ಗುಡುಗು ಸದ್ದು ಕೇಳಿಸಿತು ಎನ್ನಲಾಗಿದೆ. ಪಕ್ಕದ ಕೋಝಿಕ್ಕೋಡ್ ಮತ್ತು ಪಾಲಕ್ಕಾಡ್ ಜಿಲ್ಲೆಗಳ ಭಾಗಗಳಿಂದ ಇದೇ ರೀತಿಯ ಶಬ್ದಗಳು ಕೇಳಿಬಂದಿವೆ ಎಂದು ವರದಿಯಾಗಿದೆ. ಶಬ್ದ ಕೇಳಿ ಅಂಬಲವಾಯಲ್-ಎಡಕಲ್ ಭಾಗದ ಜನರು ಮನೆಯಿಂದ ಹೊರ ಬಂದರು. ಈ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪರಿಹಾರ ಶಿಬಿರದಲ್ಲಿ ಹಲವು ಕುಟುಂಬಗಳು ಆಶ್ರಯ ಪಡೆದಿವೆ.

ಆರಂಭದಲ್ಲಿ ಗುಡುಗು ಇರಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಶಬ್ದವು ಭೂಮಿಯ ಮೇಲ್ಮೈಯಿಂದ ಬಂದಿದೆ. ಹಲವರಿಗೆ ತಮ್ಮ ಮನೆಯ ಕಿಟಕಿ ಗಾಜುಗಳು ಅಲುಗಾಡಿರುವ ಅನುಭವವಾಗಿದೆ. ಭೂಕುಸಿತದ ತೀವ್ರತೆಯನ್ನು ಮೌಲ್ಯಮಾಪನ ಮಾಡಲು ಕೇಂದ್ರದ ತಜ್ಞರ ತಂಡವು ಈಗಾಗಲೇ ವಯನಾಡು ಪ್ರದೇಶಕ್ಕೆ ಭೇಟಿ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಜು.30 ರಂದು ಚೂರಲ್ಮಲಾ-ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ 225 ಜನರು ಸಾವನ್ನಪ್ಪಿದ್ದಾರೆ. 131 ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror