Advertisement
MIRROR FOCUS

ವಯನಾಡಿನಲ್ಲಿ ಮತ್ತೊಂದು ಭೀತಿ | ಭೂಕುಸಿತದ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವ

Share

ಕೇರಳದ(Kerala) ವಯನಾಡು(Wayanad) ಈಗಾಗಲೇ ರಣ ಭೀಕರ ಭು ಕುಸಿತ ದುರಂತಕ್ಕೆ ಹೈರಾಣಾಗಿದೆ. ಮತ್ತೆ ಮರಳಿ ಅಲ್ಲಿ ಜೀವನ ಕಟ್ಟಿಕೊಳ್ಳುವುದು ಅಸಾಧ್ಯ ಅನ್ನುವ ಮಟ್ಟಕ್ಕೆ ದುರಂತ ಸಂಭವಿಸೆದೆ. ಮತ್ತೆ ಅಲ್ಲಿ ಬದುಕು ಕಟ್ಟಿಕೊಳ್ಳಬಹುದೇನೋ ಅನ್ನುವ ಅಸೆಯಲ್ಲಿದ್ದ ವಯನಾಡಿನ ಜನತೆಗೆ ಇದೀಗ ಮತ್ತೊಂದು ಭೀತಿ ಎದುರಾಗಿದೆ.  ಇಂದು ಬೆಳಗ್ಗೆ 10:15 ಕ್ಕೆ ವಯನಾಡಿನಲ್ಲಿ ಭೂಮಿ ಕಂಪಿಸಿದ(Earth Quqke) ಅನುಭವವಾಗಿದೆ.

ಇತ್ತೀಚೆಗೆ ಭೂಕುಸಿತ ಸಂಭವಿಸಿದ ಚೂರಲ್ಮಲಾ – ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ 20 ಕಿಲೋಮೀಟರ್ ದೂರದಲ್ಲಿರುವ ಅಂಬಲವಾಯಲ್-ಎಡಕಲ್ ಪ್ರದೇಶಗಳಲ್ಲಿ ಬೆಳಗ್ಗೆ ಗುಡುಗು ಸದ್ದು ಕೇಳಿಸಿತು ಎನ್ನಲಾಗಿದೆ. ಪಕ್ಕದ ಕೋಝಿಕ್ಕೋಡ್ ಮತ್ತು ಪಾಲಕ್ಕಾಡ್ ಜಿಲ್ಲೆಗಳ ಭಾಗಗಳಿಂದ ಇದೇ ರೀತಿಯ ಶಬ್ದಗಳು ಕೇಳಿಬಂದಿವೆ ಎಂದು ವರದಿಯಾಗಿದೆ. ಶಬ್ದ ಕೇಳಿ ಅಂಬಲವಾಯಲ್-ಎಡಕಲ್ ಭಾಗದ ಜನರು ಮನೆಯಿಂದ ಹೊರ ಬಂದರು. ಈ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪರಿಹಾರ ಶಿಬಿರದಲ್ಲಿ ಹಲವು ಕುಟುಂಬಗಳು ಆಶ್ರಯ ಪಡೆದಿವೆ.

ಆರಂಭದಲ್ಲಿ ಗುಡುಗು ಇರಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಶಬ್ದವು ಭೂಮಿಯ ಮೇಲ್ಮೈಯಿಂದ ಬಂದಿದೆ. ಹಲವರಿಗೆ ತಮ್ಮ ಮನೆಯ ಕಿಟಕಿ ಗಾಜುಗಳು ಅಲುಗಾಡಿರುವ ಅನುಭವವಾಗಿದೆ. ಭೂಕುಸಿತದ ತೀವ್ರತೆಯನ್ನು ಮೌಲ್ಯಮಾಪನ ಮಾಡಲು ಕೇಂದ್ರದ ತಜ್ಞರ ತಂಡವು ಈಗಾಗಲೇ ವಯನಾಡು ಪ್ರದೇಶಕ್ಕೆ ಭೇಟಿ ನೀಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಜು.30 ರಂದು ಚೂರಲ್ಮಲಾ-ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ 225 ಜನರು ಸಾವನ್ನಪ್ಪಿದ್ದಾರೆ. 131 ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

6 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

13 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

14 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

23 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

24 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago