ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ ನಸುಕಿನ ಜಾವ ಗುಡ್ಡ ಕುಸಿತ ಉಂಟಾಗಿದೆ. ಭಾರಿ ಭೂಕುಸಿತದ ನಂತರ ಹತ್ತು ಮೃತದೇಹಗಳು ಪತ್ತೆಯಾಗಿದೆ. ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಕೇರಳ ರಾಜ್ಯ ವಿಪತ್ತು ನರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದೆ. ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್ಡಿಆರ್ಎಫ್ ತಂಡ ಕೂಡ ಸಹಾಯಕ್ಕೆ ತೆರಳುತ್ತಿದೆ.………ಮುಂದೆ ಓದಿ……..
ಮಂಗಳವಾರ ಮುಂಜಾನೆ ಕೇರಳದ ವಯನಾಡ್ನ ಚೂರಲ್ಮಲಾ ಮತ್ತು ಮುಂಡಕ್ಕಾಯಿಯಲ್ಲಿ ಭಾರೀ ಮಳೆಯ ನಡುವೆ ಭೂಕುಸಿತ ಸಂಭವಿಸಿದೆ. ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ. ತೊರ್ನಾಡ್ ಗ್ರಾಮದಲ್ಲಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತದಲ್ಲಿ ಸಾವನ್ನಪ್ಪಿದೆ ಎಂದು ವಯನಾಡ್ ಜಿಲ್ಲಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೇರಳದ ಸುದ್ದವಾಹಿನಿ ಮನೋರಮಾ ಪ್ರಕಾರ, ಗ್ರಾಮದ ಪ್ರಮುಖ ಸೇತುವೆಯೊಂದು ಕೊಚ್ಚಿ ಹೋಗಿದೆ. ಭೂಕುಸಿತದ ಸ್ಥಳಗಳಲ್ಲಿ ಅನೇಕರು ಸಿಲುಕಿಕೊಂಡಿದ್ದಾರೆ. ಮನೋರಮಾ ವರದಿಗಳ ಪ್ರಕಾರ ಸಾವುನೋವುಗಳ ಸಂಖ್ಯೆ ನಿಖರವಾಗಿ ತಿಳಿದಿಲ್ಲ.
Wayanad Landslide | Ten killed, hundreds feared trapped amid landslides near Meppadi | rescue operations underway
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…