ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ ನಸುಕಿನ ಜಾವ ಗುಡ್ಡ ಕುಸಿತ ಉಂಟಾಗಿದೆ. ಭಾರಿ ಭೂಕುಸಿತದ ನಂತರ ಹತ್ತು ಮೃತದೇಹಗಳು ಪತ್ತೆಯಾಗಿದೆ. ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಕೇರಳ ರಾಜ್ಯ ವಿಪತ್ತು ನರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದೆ. ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್ಡಿಆರ್ಎಫ್ ತಂಡ ಕೂಡ ಸಹಾಯಕ್ಕೆ ತೆರಳುತ್ತಿದೆ.………ಮುಂದೆ ಓದಿ……..
ಮಂಗಳವಾರ ಮುಂಜಾನೆ ಕೇರಳದ ವಯನಾಡ್ನ ಚೂರಲ್ಮಲಾ ಮತ್ತು ಮುಂಡಕ್ಕಾಯಿಯಲ್ಲಿ ಭಾರೀ ಮಳೆಯ ನಡುವೆ ಭೂಕುಸಿತ ಸಂಭವಿಸಿದೆ. ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ. ತೊರ್ನಾಡ್ ಗ್ರಾಮದಲ್ಲಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತದಲ್ಲಿ ಸಾವನ್ನಪ್ಪಿದೆ ಎಂದು ವಯನಾಡ್ ಜಿಲ್ಲಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೇರಳದ ಸುದ್ದವಾಹಿನಿ ಮನೋರಮಾ ಪ್ರಕಾರ, ಗ್ರಾಮದ ಪ್ರಮುಖ ಸೇತುವೆಯೊಂದು ಕೊಚ್ಚಿ ಹೋಗಿದೆ. ಭೂಕುಸಿತದ ಸ್ಥಳಗಳಲ್ಲಿ ಅನೇಕರು ಸಿಲುಕಿಕೊಂಡಿದ್ದಾರೆ. ಮನೋರಮಾ ವರದಿಗಳ ಪ್ರಕಾರ ಸಾವುನೋವುಗಳ ಸಂಖ್ಯೆ ನಿಖರವಾಗಿ ತಿಳಿದಿಲ್ಲ.
Wayanad Landslide | Ten killed, hundreds feared trapped amid landslides near Meppadi | rescue operations underway
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…