ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ ನಸುಕಿನ ಜಾವ ಗುಡ್ಡ ಕುಸಿತ ಉಂಟಾಗಿದೆ. ಭಾರಿ ಭೂಕುಸಿತದ ನಂತರ ಹತ್ತು ಮೃತದೇಹಗಳು ಪತ್ತೆಯಾಗಿದೆ. ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಕೇರಳ ರಾಜ್ಯ ವಿಪತ್ತು ನರ್ವಹಣಾ ಪ್ರಾಧಿಕಾರ (ಕೆಎಸ್ಡಿಎಂಎ) ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸುತ್ತಿದೆ. ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳೊಂದಿಗೆ ಹೆಚ್ಚುವರಿ ಎನ್ಡಿಆರ್ಎಫ್ ತಂಡ ಕೂಡ ಸಹಾಯಕ್ಕೆ ತೆರಳುತ್ತಿದೆ.………ಮುಂದೆ ಓದಿ……..
ಮಂಗಳವಾರ ಮುಂಜಾನೆ ಕೇರಳದ ವಯನಾಡ್ನ ಚೂರಲ್ಮಲಾ ಮತ್ತು ಮುಂಡಕ್ಕಾಯಿಯಲ್ಲಿ ಭಾರೀ ಮಳೆಯ ನಡುವೆ ಭೂಕುಸಿತ ಸಂಭವಿಸಿದೆ. ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ. ತೊರ್ನಾಡ್ ಗ್ರಾಮದಲ್ಲಿದ್ದ ನೇಪಾಳಿ ಕುಟುಂಬದ ಒಂದು ವರ್ಷದ ಮಗು ಭೂಕುಸಿತದಲ್ಲಿ ಸಾವನ್ನಪ್ಪಿದೆ ಎಂದು ವಯನಾಡ್ ಜಿಲ್ಲಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೇರಳದ ಸುದ್ದವಾಹಿನಿ ಮನೋರಮಾ ಪ್ರಕಾರ, ಗ್ರಾಮದ ಪ್ರಮುಖ ಸೇತುವೆಯೊಂದು ಕೊಚ್ಚಿ ಹೋಗಿದೆ. ಭೂಕುಸಿತದ ಸ್ಥಳಗಳಲ್ಲಿ ಅನೇಕರು ಸಿಲುಕಿಕೊಂಡಿದ್ದಾರೆ. ಮನೋರಮಾ ವರದಿಗಳ ಪ್ರಕಾರ ಸಾವುನೋವುಗಳ ಸಂಖ್ಯೆ ನಿಖರವಾಗಿ ತಿಳಿದಿಲ್ಲ.
Wayanad Landslide | Ten killed, hundreds feared trapped amid landslides near Meppadi | rescue operations underway
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…