Advertisement
MIRROR FOCUS

ವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆ

Share

ಕೇರಳದ ವಯನಾಡಿನಲ್ಲಿನಡೆದ ದುರಂತ ನಿಜಕ್ಕೂ ಇಡೀ ಮನಕುಲವನ್ನೇ ಬೆಚ್ಚಿ ಬೀಳಿಸುವಂತದ್ದು. ಯಾರೂ, ಎಲ್ಲಿ, ಯಾವಾಗ ಏನಾಯ್ತು ಅನ್ನೋದನ್ನು ತಿಳಿಯುವಷ್ಟರಲ್ಲಿ ಎಲ್ಲವೂ ಮಣ್ಣು ಪಾಲಾಗಿತ್ತು. ಇಂತಹ ದುರಂತದ ನಡುವೆಯೂ ಕುಟುಂಬವೊಂದು ತಪ್ಪಿಸಿಕೊಂಡು ದೀಪದ ಬೆಳಕಿನಲ್ಲಿ ಗುಡ್ಡ ಹತ್ತಿದೆ. ಅಲ್ಲಿ ಹೋದರೆ ಬೆಂಕಿಯಿಂದ ತಪ್ಪಿಸಿಕೊಂಡು ಬಂದವರಿಗೆ ಬಾಣಲೆಗೆ ಬಿದ್ದ ಪರಿಸ್ಥಿತಿ ಎದುರಾಗಿದೆ. ಆದರೆ ಅವರನ್ನು ಕೈ ಹಿಡಿದು ಕಾಪಾಡಿದ್ದು ಅದೇ.

ಸಂಕಷ್ಟದಲ್ಲಿದ್ದ ಸಂತ್ರಸ್ತರಿಗೆ ಆ ಕರಾಳ ರಾತ್ರಿ ಬೆಟ್ಟದಲ್ಲಿ ಎದುರಾಗಿದ್ದು ಒಂದು ದೈತ್ಯ ಕಾಡಾನೆ. ಆದರೆ ಅವರನ್ನು ಕಾಪಾಡಿ ಅವರಿಗೆ ಬೆಳಗಾಗುವ ತನಕ ಕಾವಾಲಾಗಿ ನಿಂತಿದ್ದು ಇದೇ ಗಜರಾಜ. ಸಾವಿನ ದವಡೆಯಿಂದ ಪಾರಾಗಿ ಬಂದ ವೃದ್ಧೆ ಸುಜಾತ ಈ ಕುರಿತು ಸ್ಥಳೀಯರೊಬ್ಬರಿಗೆ ಮಾಹಿತಿ ಕೊಟ್ಟಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ. ಏಶಿಯಾನೆಟ್‌ ನ್ಯೂಸ್‌ ಸಹಿತ ಕೇರಳದ ವಿವಿಧ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ.ಮಹಿಳೆಯ ಜೊತೆ ಮಾತನಾಡಿದ್ದಾರೆ. ಅವರು ಹೇಳಿದ್ದು ಹೀಗೆ….

ರಾತ್ರಿ  ಭಾರೀ ಮಳೆಯಾಗುತ್ತಿದ್ದರಿಂದ, ಮಧ್ಯರಾತ್ರಿ 1:15ಕ್ಕೆ ಎಚ್ಚರವಾಯಿತು. ದೊಡ್ಡ ಶಬ್ದ ಕೇಳಿಸಿದ ಬೆನ್ನಲ್ಲೇ ನಮ್ಮ ಮನೆಗೆ ನೀರು ನುಗ್ಗಿತು. ನಾವೆಲ್ಲರೂ ಹಾಸಿಗೆಯ ಮೇಲೆ ಕುಳಿತೆವು. ಆಗ ನಮ್ಮ ನೆರೆಹೊರೆಯವರ ಮನೆಗಳ ಅವಶೇಷಗಳ ಜೊತೆಗೆ ದೊಡ್ಡ ಮರದ ದಿಮ್ಮಿಗಳು ಮನೆಯ ಮೇಲೆ ಬಡಿಯುತ್ತಿದ್ದವು. ನಮ್ಮ ಮನೆಯ ಮೇಲ್ಛಾವಣಿ ನಮ್ಮ ಮೇಲೆ ಕುಸಿದು ಬಿದ್ದಿದ್ದು, ನನ್ನ ಮಗಳು ಗಂಭೀರವಾಗಿ ಗಾಯಗೊಂಡಿದ್ದಳು. ಗುಡ್ಡ ಜರಿದು ಮನೆ ಉರುಳಿ ಬಿದ್ದಾಗ ಮನೆಯ ಚಿಮಿಣಿಯಲ್ಲಿ ಸ್ವಲ್ಪ ಜಾಗ ಕಾಣಿಸಿತು. ನಾನು ಇಟ್ಟಿಗೆ ರಾಶಿಯನ್ನು ಸರಿಸಿ ಜಾಗ ಮಾಡಿಕೊಂಡು ಮಗಳು, ಮೊಮ್ಮಗಳು, ಅಳಿಯ ಎಲ್ಲರೂ ಹೊರ ಬಂದು ಬೆಟ್ಟದ ಬಳಿ ಓಡಿದೆವು.
ಹೇಗೋ ಒದ್ದಾಡಿ ಬೆಟ್ಟದ ಬಳಿಗೆ ಬಂದಾಗ ಅಲ್ಲಿ ದೊಡ್ಡ ಕಾಡಾನೆ ನಿಂತಿತ್ತು. ಆಗ ಆನೆ ಬಳಿ ನಿಂತು ಪ್ರಾರ್ಥನೆ ಮಾಡಿದೆವು. ಒಂದು ದೊಡ್ಡ ದುರಂತದಿಂದ ತಪ್ಪಿಸಿಕೊಂಡು ಬಂದಿದ್ದೇವೆ. ನೀನು ನಮಗೇನೂ ಮಾಡಬೇಡಪ್ಪಾ ಎಂದು ನಾನು ಆನೆಯ ಮುಂದೆ ನಿಂತು ಕಣ್ಣೀರು ಹಾಕಿದೆ. ಆನೆಯ ಕಣ್ಣಿನಿಂದಲೂ ನೀರು ಬಂತು. ರಾತ್ರಿ ಬೆಳಗಾಗುವವರೆಗೆ ನಾವು ಆನೆಯ ಕಾಲಿನ ಹತ್ತಿರವೇ ಸಮಯ ಕಳೆದೆವು. ರಾತ್ರಿ ಪೂರ್ತಿ ಮಳೆ, ಸರಿಯಾಗಿ ನಿಂತುಕೊಳ್ಳಲೂ ಸಾಧ್ಯವಾಗುತ್ತಿರಲಿಲ್ಲ. ಬೆಳಗ್ಗೆ 6 ಗಂಟೆಯಾದಾಗ ಎಲ್ಲಿಂದಲೋ ಜನರು ಬಂದರು. ನಮ್ಮನ್ನು ಕಾಪಾಡಲು ನಮ್ಮ ಊರಿನವರು ಯಾರೂ ಬದುಕುಳಿದಿರಲಿಲ್ಲ. ಆಮೇಲೆ ದೂರದೂರಿನಿಂದ ಬಂದ ಜನರು ನಮ್ಮನ್ನು ಕಾಪಾಡಿ ಸುರಕ್ಷಿತ ಜಾಗಕ್ಕೆ ತಲುಪಿಸಿದರು ಎಂದು ಸುಜಾತ  ತಿಳಿಸಿದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

53 minutes ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago