Advertisement
MIRROR FOCUS

ವಯನಾಡು ಭೀಕರ ದುರಂತ | ಭೂಕುಸಿತದಿಂದ ತಪ್ಪಿಸಿಕೊಂಡವರನ್ನು ಕಾಡಿನಲ್ಲಿ ಕಾಪಾಡಿದ ಕಾಡಾನೆ

Share

ಕೇರಳದ ವಯನಾಡಿನಲ್ಲಿನಡೆದ ದುರಂತ ನಿಜಕ್ಕೂ ಇಡೀ ಮನಕುಲವನ್ನೇ ಬೆಚ್ಚಿ ಬೀಳಿಸುವಂತದ್ದು. ಯಾರೂ, ಎಲ್ಲಿ, ಯಾವಾಗ ಏನಾಯ್ತು ಅನ್ನೋದನ್ನು ತಿಳಿಯುವಷ್ಟರಲ್ಲಿ ಎಲ್ಲವೂ ಮಣ್ಣು ಪಾಲಾಗಿತ್ತು. ಇಂತಹ ದುರಂತದ ನಡುವೆಯೂ ಕುಟುಂಬವೊಂದು ತಪ್ಪಿಸಿಕೊಂಡು ದೀಪದ ಬೆಳಕಿನಲ್ಲಿ ಗುಡ್ಡ ಹತ್ತಿದೆ. ಅಲ್ಲಿ ಹೋದರೆ ಬೆಂಕಿಯಿಂದ ತಪ್ಪಿಸಿಕೊಂಡು ಬಂದವರಿಗೆ ಬಾಣಲೆಗೆ ಬಿದ್ದ ಪರಿಸ್ಥಿತಿ ಎದುರಾಗಿದೆ. ಆದರೆ ಅವರನ್ನು ಕೈ ಹಿಡಿದು ಕಾಪಾಡಿದ್ದು ಅದೇ.

ಸಂಕಷ್ಟದಲ್ಲಿದ್ದ ಸಂತ್ರಸ್ತರಿಗೆ ಆ ಕರಾಳ ರಾತ್ರಿ ಬೆಟ್ಟದಲ್ಲಿ ಎದುರಾಗಿದ್ದು ಒಂದು ದೈತ್ಯ ಕಾಡಾನೆ. ಆದರೆ ಅವರನ್ನು ಕಾಪಾಡಿ ಅವರಿಗೆ ಬೆಳಗಾಗುವ ತನಕ ಕಾವಾಲಾಗಿ ನಿಂತಿದ್ದು ಇದೇ ಗಜರಾಜ. ಸಾವಿನ ದವಡೆಯಿಂದ ಪಾರಾಗಿ ಬಂದ ವೃದ್ಧೆ ಸುಜಾತ ಈ ಕುರಿತು ಸ್ಥಳೀಯರೊಬ್ಬರಿಗೆ ಮಾಹಿತಿ ಕೊಟ್ಟಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗುತ್ತಿದೆ. ಏಶಿಯಾನೆಟ್‌ ನ್ಯೂಸ್‌ ಸಹಿತ ಕೇರಳದ ವಿವಿಧ ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿವೆ.ಮಹಿಳೆಯ ಜೊತೆ ಮಾತನಾಡಿದ್ದಾರೆ. ಅವರು ಹೇಳಿದ್ದು ಹೀಗೆ….

ರಾತ್ರಿ  ಭಾರೀ ಮಳೆಯಾಗುತ್ತಿದ್ದರಿಂದ, ಮಧ್ಯರಾತ್ರಿ 1:15ಕ್ಕೆ ಎಚ್ಚರವಾಯಿತು. ದೊಡ್ಡ ಶಬ್ದ ಕೇಳಿಸಿದ ಬೆನ್ನಲ್ಲೇ ನಮ್ಮ ಮನೆಗೆ ನೀರು ನುಗ್ಗಿತು. ನಾವೆಲ್ಲರೂ ಹಾಸಿಗೆಯ ಮೇಲೆ ಕುಳಿತೆವು. ಆಗ ನಮ್ಮ ನೆರೆಹೊರೆಯವರ ಮನೆಗಳ ಅವಶೇಷಗಳ ಜೊತೆಗೆ ದೊಡ್ಡ ಮರದ ದಿಮ್ಮಿಗಳು ಮನೆಯ ಮೇಲೆ ಬಡಿಯುತ್ತಿದ್ದವು. ನಮ್ಮ ಮನೆಯ ಮೇಲ್ಛಾವಣಿ ನಮ್ಮ ಮೇಲೆ ಕುಸಿದು ಬಿದ್ದಿದ್ದು, ನನ್ನ ಮಗಳು ಗಂಭೀರವಾಗಿ ಗಾಯಗೊಂಡಿದ್ದಳು. ಗುಡ್ಡ ಜರಿದು ಮನೆ ಉರುಳಿ ಬಿದ್ದಾಗ ಮನೆಯ ಚಿಮಿಣಿಯಲ್ಲಿ ಸ್ವಲ್ಪ ಜಾಗ ಕಾಣಿಸಿತು. ನಾನು ಇಟ್ಟಿಗೆ ರಾಶಿಯನ್ನು ಸರಿಸಿ ಜಾಗ ಮಾಡಿಕೊಂಡು ಮಗಳು, ಮೊಮ್ಮಗಳು, ಅಳಿಯ ಎಲ್ಲರೂ ಹೊರ ಬಂದು ಬೆಟ್ಟದ ಬಳಿ ಓಡಿದೆವು.
ಹೇಗೋ ಒದ್ದಾಡಿ ಬೆಟ್ಟದ ಬಳಿಗೆ ಬಂದಾಗ ಅಲ್ಲಿ ದೊಡ್ಡ ಕಾಡಾನೆ ನಿಂತಿತ್ತು. ಆಗ ಆನೆ ಬಳಿ ನಿಂತು ಪ್ರಾರ್ಥನೆ ಮಾಡಿದೆವು. ಒಂದು ದೊಡ್ಡ ದುರಂತದಿಂದ ತಪ್ಪಿಸಿಕೊಂಡು ಬಂದಿದ್ದೇವೆ. ನೀನು ನಮಗೇನೂ ಮಾಡಬೇಡಪ್ಪಾ ಎಂದು ನಾನು ಆನೆಯ ಮುಂದೆ ನಿಂತು ಕಣ್ಣೀರು ಹಾಕಿದೆ. ಆನೆಯ ಕಣ್ಣಿನಿಂದಲೂ ನೀರು ಬಂತು. ರಾತ್ರಿ ಬೆಳಗಾಗುವವರೆಗೆ ನಾವು ಆನೆಯ ಕಾಲಿನ ಹತ್ತಿರವೇ ಸಮಯ ಕಳೆದೆವು. ರಾತ್ರಿ ಪೂರ್ತಿ ಮಳೆ, ಸರಿಯಾಗಿ ನಿಂತುಕೊಳ್ಳಲೂ ಸಾಧ್ಯವಾಗುತ್ತಿರಲಿಲ್ಲ. ಬೆಳಗ್ಗೆ 6 ಗಂಟೆಯಾದಾಗ ಎಲ್ಲಿಂದಲೋ ಜನರು ಬಂದರು. ನಮ್ಮನ್ನು ಕಾಪಾಡಲು ನಮ್ಮ ಊರಿನವರು ಯಾರೂ ಬದುಕುಳಿದಿರಲಿಲ್ಲ. ಆಮೇಲೆ ದೂರದೂರಿನಿಂದ ಬಂದ ಜನರು ನಮ್ಮನ್ನು ಕಾಪಾಡಿ ಸುರಕ್ಷಿತ ಜಾಗಕ್ಕೆ ತಲುಪಿಸಿದರು ಎಂದು ಸುಜಾತ  ತಿಳಿಸಿದರು.
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

2 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

3 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

3 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

11 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

15 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

15 hours ago